<p><strong>ಬೆಂಗಳೂರು</strong>: ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಾಗೂ ದೆಹಲಿ ಕರ್ನಾಟಕ ಸಂಘದ ಸಹಯೋಗದಲ್ಲಿ ಇದೇ 17ರಂದು ದೆಹಲಿ ಕರ್ನಾಟಕ ಸಂಘದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆ ಕುರಿತು ವಿಚಾರಸಂಕಿರಣ ಆಯೋಜಿಸಲಾಗಿದೆ.</p><p>ಮಂಗಳವಾರ ನಡೆದ ಸುದ್ದಿಗೋಷ್ಠಿ<br>ಯಲ್ಲಿ ಮಾತನಾಡಿದ ಸಾಹಿತಿ ಹಂ.ಪ. ನಾಗರಾಜಯ್ಯ, ಟ್ರಸ್ಟ್ನ ಅಧ್ಯಕ್ಷ ಎಚ್.ಕೆ. ರಾಮು, ‘ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ವಿಚಾರಸಂಕಿರಣ ಉದ್ಘಾಟಿಸಲಿದ್ದಾರೆ. ಬೇಲಿಮಠದ ಶಿವರುದ್ರ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ<br>ನಿಶ್ಚಲಾನಂದನಾಥ ಸ್ವಾಮೀಜಿ, ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರ ವನ್ನು ಹಾಗೂ ಹಿಂದಿ ಭಾಷೆಗೆ ಅನುವಾದ<br>ಗೊಂಡಿರುವ ಕುವೆಂಪು ಅವರ ‘ರಾಮಾಯಣ ದರ್ಶನಂ’ ಗ್ರಂಥವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಲಿದ್ದಾರೆ’ ಎಂದರು.</p><p>‘ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಜಿ.ಟಿ. ದೇವೇಗೌಡ, ವಿಶ್ರಾಂತ ಕುಲಪತಿ<br>ಕೆ.ಎಸ್. ರಂಗಪ್ಪ, ದೆಹಲಿ ಕರ್ನಾಟಕದ ಸಂಘದ ಅಧ್ಯಕ್ಷ ಸಿ.ಎಂ. ನಾಗರಾಜ್ ಭಾಗವಹಿಸಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಾಗೂ ದೆಹಲಿ ಕರ್ನಾಟಕ ಸಂಘದ ಸಹಯೋಗದಲ್ಲಿ ಇದೇ 17ರಂದು ದೆಹಲಿ ಕರ್ನಾಟಕ ಸಂಘದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆ ಕುರಿತು ವಿಚಾರಸಂಕಿರಣ ಆಯೋಜಿಸಲಾಗಿದೆ.</p><p>ಮಂಗಳವಾರ ನಡೆದ ಸುದ್ದಿಗೋಷ್ಠಿ<br>ಯಲ್ಲಿ ಮಾತನಾಡಿದ ಸಾಹಿತಿ ಹಂ.ಪ. ನಾಗರಾಜಯ್ಯ, ಟ್ರಸ್ಟ್ನ ಅಧ್ಯಕ್ಷ ಎಚ್.ಕೆ. ರಾಮು, ‘ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ವಿಚಾರಸಂಕಿರಣ ಉದ್ಘಾಟಿಸಲಿದ್ದಾರೆ. ಬೇಲಿಮಠದ ಶಿವರುದ್ರ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ<br>ನಿಶ್ಚಲಾನಂದನಾಥ ಸ್ವಾಮೀಜಿ, ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರ ವನ್ನು ಹಾಗೂ ಹಿಂದಿ ಭಾಷೆಗೆ ಅನುವಾದ<br>ಗೊಂಡಿರುವ ಕುವೆಂಪು ಅವರ ‘ರಾಮಾಯಣ ದರ್ಶನಂ’ ಗ್ರಂಥವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಲಿದ್ದಾರೆ’ ಎಂದರು.</p><p>‘ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಜಿ.ಟಿ. ದೇವೇಗೌಡ, ವಿಶ್ರಾಂತ ಕುಲಪತಿ<br>ಕೆ.ಎಸ್. ರಂಗಪ್ಪ, ದೆಹಲಿ ಕರ್ನಾಟಕದ ಸಂಘದ ಅಧ್ಯಕ್ಷ ಸಿ.ಎಂ. ನಾಗರಾಜ್ ಭಾಗವಹಿಸಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>