‘ಕೋವಿಡ್ನಿಂದಾಗಿ ಜನರ ಬದುಕು ತತ್ತರಿಸಿದೆ. ಹೀಗಾಗಿ ಸರ್ಕಾರವು ಕೂಡಲೇ ಹೆದ್ದಾರಿ ಶುಲ್ಕ ಪರಿಷ್ಕರಣೆ ನಿರ್ಧಾರ ಕೈಬಿಡಬೇಕು. ಅಥವಾ ಇನ್ನು ಎರಡು ವರ್ಷ ಇದನ್ನು ಮುಂದೂಡಬೇಕು. ಟ್ಯಾಕ್ಸಿ, ಲಾರಿ ಹಾಗೂ ಟ್ರಕ್ಗಳು ಒಂದೆಡೆಯಿಂದ ಮತ್ತೊಂದೆಡೆಗೆ ಸರಕು ಸಾಗಾಣೆ ಮಾಡುವುದರಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಹರಿದುಬರುತ್ತಿದೆ. ಕೋವಿಡ್ನಿಂದಾಗಿ ಟ್ರಾವೆಲ್ಸ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಹುತೇಕರು ಲಾರಿ, ಟ್ರಕ್ಗಳನ್ನು ರಸ್ತೆಗಿಳಿಸಲೂ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಸರ್ಕಾರ ತನ್ನ ನಿರ್ಧಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು’ ಎಂದು ರಾಜ್ಯ ಟ್ರಾವೆಲ್ಸ್ ಮಾಲೀಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಒತ್ತಾಯಿಸಿದ್ದಾರೆ.