ಬಯೋಕಾನ್ ಸಂಸ್ಥೆ ಭಾನುವಾರ ಆಯೋಜಿಸಿದ್ದ ‘ಬೆಂಗಳೂರು ಕಾರ್ಯಸೂಚಿ’ ಕುರಿತ ಚರ್ಚೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜಧಾನಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರ ಅಭಿಪ್ರಾಯ ಆಲಿಸಲಾಗುವುದು. ಬಳಿಕ ಸಂಪುಟ ಸದಸ್ಯರ ಜತೆ ಚರ್ಚಿಸಿ ಕಾರ್ಯಸೂಚಿಯನ್ನು ಸಿದ್ಧಪಡಿಸಲಾಗುವುದು’ ಎಂದರು.