<p><strong>ಬೆಂಗಳೂರು:</strong> ನಗರದ ಉಪ್ಪಾರ ಪೇಟೆ ಪೊಲೀಸ್ ಠಾಣೆಯ ಎದುರು ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3192 ಸಂಸ್ಥೆ ಹಾಗೂ ಸುಲಭ್ ಇಂಟರ್ನ್ಯಾಷನಲ್ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ನಿರ್ಮಿಸಿರುವ ಶೌಚಾಲಯವನ್ನು ಶುಕ್ರವಾರ ಉದ್ಘಾಟಿಸಲಾಯಿತು.</p>.<p>ಶೌಚಾಲಯ ಉದ್ಘಾಟಿಸಿದ ರೋಟರಿ ಇಂಟರ್ ನ್ಯಾಷನಲ್ (ಆರ್ಐ) ಡೈರೆಕ್ಟರ್ ಕೆ.ಪಿ. ನಾಗೇಶ್ ಮಾತನಾಡಿ, ‘ಮೊದಲಿನಿಂದಲೂ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿರುವ ರೋಟರಿ ಸಂಸ್ಥೆ, ದೇಶದಲ್ಲೇ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಪ್ರತ್ಯೇಕ ಶೌಚಾಲಯವನ್ನು ನಿರ್ಮಿಸಿದೆ’ ಎಂದರು.</p>.<p>‘ಸುಲಭ್ ಇಂಟರ್ನ್ಯಾಷನಲ್ ಸಹಯೋಗದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್) ಬಳಸಿಕೊಂಡು ದೇಶದ ಪ್ರತಿ ಜಿಲ್ಲೆ, ತಾಲ್ಲೂಕು ಹಂತದಲ್ಲೂ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಇಂಥ ಶೌಚಾಲಯವನ್ನು ನಿರ್ಮಿಸುವುದು ನಮ್ಮ ಗುರಿಯಾಗಿದೆ’ ಎಂದರು.</p>.<p>ಆರ್ಐನ ಚಾರ್ಟರ್ ಗವರ್ನರ್ ವಿ. ಶ್ರೀನಿವಾಸ ಮೂರ್ತಿ, ‘ಲಿಂಗತ್ವ ಅಲ್ಪಸಂಖ್ಯಾತರು ಪುರುಷರು ಮತ್ತು ಮಹಿಳೆಯರ ಶೌಚಾಲಯಗಳನ್ನು ಪ್ರವೇಶಿಸಲು ಅವಕಾಶ ಇಲ್ಲ. ಇದರಿಂದ ಅವರು ಶೌಚಾಲಯದ ಸೌಲಭ್ಯವಿಲ್ಲದೇ ಪರಿತಪಿಸುವುದನ್ನು ಗಮನಿಸಿದ್ದೆವು. ಅವರಿಗೆ ಶೌಚಾಲಯ ನಿರ್ಮಿಸಬೇಕೆಂಬ ಕನಸಿತ್ತು. ಅದು ಈಗ ಸಾಕಾರಗೊಂಡಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಉಪ್ಪಾರ ಪೇಟೆ ಪೊಲೀಸ್ ಠಾಣೆಯ ಎದುರು ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3192 ಸಂಸ್ಥೆ ಹಾಗೂ ಸುಲಭ್ ಇಂಟರ್ನ್ಯಾಷನಲ್ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ನಿರ್ಮಿಸಿರುವ ಶೌಚಾಲಯವನ್ನು ಶುಕ್ರವಾರ ಉದ್ಘಾಟಿಸಲಾಯಿತು.</p>.<p>ಶೌಚಾಲಯ ಉದ್ಘಾಟಿಸಿದ ರೋಟರಿ ಇಂಟರ್ ನ್ಯಾಷನಲ್ (ಆರ್ಐ) ಡೈರೆಕ್ಟರ್ ಕೆ.ಪಿ. ನಾಗೇಶ್ ಮಾತನಾಡಿ, ‘ಮೊದಲಿನಿಂದಲೂ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿರುವ ರೋಟರಿ ಸಂಸ್ಥೆ, ದೇಶದಲ್ಲೇ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಪ್ರತ್ಯೇಕ ಶೌಚಾಲಯವನ್ನು ನಿರ್ಮಿಸಿದೆ’ ಎಂದರು.</p>.<p>‘ಸುಲಭ್ ಇಂಟರ್ನ್ಯಾಷನಲ್ ಸಹಯೋಗದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್) ಬಳಸಿಕೊಂಡು ದೇಶದ ಪ್ರತಿ ಜಿಲ್ಲೆ, ತಾಲ್ಲೂಕು ಹಂತದಲ್ಲೂ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಇಂಥ ಶೌಚಾಲಯವನ್ನು ನಿರ್ಮಿಸುವುದು ನಮ್ಮ ಗುರಿಯಾಗಿದೆ’ ಎಂದರು.</p>.<p>ಆರ್ಐನ ಚಾರ್ಟರ್ ಗವರ್ನರ್ ವಿ. ಶ್ರೀನಿವಾಸ ಮೂರ್ತಿ, ‘ಲಿಂಗತ್ವ ಅಲ್ಪಸಂಖ್ಯಾತರು ಪುರುಷರು ಮತ್ತು ಮಹಿಳೆಯರ ಶೌಚಾಲಯಗಳನ್ನು ಪ್ರವೇಶಿಸಲು ಅವಕಾಶ ಇಲ್ಲ. ಇದರಿಂದ ಅವರು ಶೌಚಾಲಯದ ಸೌಲಭ್ಯವಿಲ್ಲದೇ ಪರಿತಪಿಸುವುದನ್ನು ಗಮನಿಸಿದ್ದೆವು. ಅವರಿಗೆ ಶೌಚಾಲಯ ನಿರ್ಮಿಸಬೇಕೆಂಬ ಕನಸಿತ್ತು. ಅದು ಈಗ ಸಾಕಾರಗೊಂಡಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>