‘ಕಿಶೋರ್ ಹಾಗೂ ಸ್ನೇಹಿತರು ಹೊಂಡಾ ಸಿಟಿ ಕಾರಿನಲ್ಲಿ ಹೆಬ್ಬಾಳದಿಂದ ಯಲಹಂಕ ಮಾರ್ಗವಾಗಿ ವಿಮಾನ ನಿಲ್ದಾಣದತ್ತ ಹೊರಟಿದ್ದರು. ನಿರಂಜನ್ ಎಂಬುವರು ಕಾರು ಓಡಿಸುತ್ತಿದ್ದರು. ವೆಂಕಟಾಲ ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಗುದ್ದಿದ್ದ ಕಾರು, ಎದುರಿಗೆ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿತ್ತು. ಅದರ ಹಿಂದೆಯೇ ಬರುತ್ತಿದ್ದ ಇನ್ನೊಂದು ಕಾರಿಗೂ ಗುದ್ದಿ ರಸ್ತೆಯಲ್ಲೇ ಉರುಳಿಬಿದ್ದಿತ್ತು.’