ಇಂಡಿಯಾ ಫಾರ್ ಐಎಎಸ್ ಅಕಾಡೆಮಿ ಸಂಸ್ಥಾಪಕ ಶ್ರೀನಿವಾಸ್ ‘ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ತರಬೇತಿ ನೀಡಬೇಕೆಂಬುದು ಸಂಸ್ಥೆಯ ಗುರಿ. ನಾಲ್ಕು ವರ್ಷಗಳ ಹಿಂದೆ ರಾಜ್ಯದ ಅಭ್ಯರ್ಥಿಗಳು ತರಬೇತಿಗಾಗಿ ನವದೆಹಲಿ, ಉತ್ತರಾಖಂಡಕ್ಕೆ ಹೋಗಬೇಕಿತ್ತು. ಲಕ್ಷಾಂತರ ಹಣ ಪಾವತಿಸಲಾಗದೆ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಕನಸನ್ನೇ ಕೈಚೆಲ್ಲುತ್ತಿದ್ದರು. ಅಂತಹ ವಿದ್ಯಾರ್ಥಿಗಳ ಕನಸನ್ನು ಪೋಷಿಸುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ’ ಎಂದು ತಿಳಿಸಿದರು.