<p><strong>ಬೆಂಗಳೂರು: </strong>ನಕಲಿ ಖಚಿತ ಅಳತೆ ವರದಿ (ಸಿಡಿಆರ್) ಸೃಷ್ಟಿಸಿ ಬಡಾವಣೆ ಯೋಜನೆಗಳಿಗೆ ಅನುಮತಿ ನೀಡಿದ್ದ, ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಸಹಕರಿಸುತ್ತಿದ್ದ ಆರೋಪದಡಿ ಬಂಧಿಸಲಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಾಲ್ವರು ಸಹಾಯಕ ಎಂಜಿನಿಯರ್ಗಳನ್ನು ಹೆಚ್ಚಿನ ವಿಚಾರಣೆಗಾಗಿ ಶೇಷಾದ್ರಿಪುರ ಪೊಲೀಸರ ಕಸ್ಟಡಿಗೆ ನೀಡಲಾಗಿದೆ.</p>.<p>ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬನಶಂಕರಿ ಕಚೇರಿಯ ಎಂ.ಎಸ್. ಶಂಕರ್ ಮೂರ್ತಿ, ಆರ್.ಟಿ.ನಗರ ಕಚೇರಿಯ ಕೆ.ಎನ್. ರವಿಕುಮಾರ್, ಡಿ. ಶ್ರೀರಾಮ್, ಶಬ್ಬೀರ್ ಅಹಮ್ಮದ್ ಹಾಗೂ ಶ್ರೀನಿವಾಸ್ ಅವರನ್ನು ಬಂಧಿಸಿದ್ದರು. ಆರಂಭದಲ್ಲಿ ಶ್ರೀನಿವಾಸ್ ಅವರನ್ನು ಮಾತ್ರ ಕಸ್ಡಡಿಗೆ ಪಡೆದು ವಿಚಾರಣೆ ನಡೆಸಿದ್ದರು.</p>.<p>ಆದರೆ, ಉಳಿದ ನಾಲ್ವರು ನ್ಯಾಯಾಂಗ ಬಂಧನದಲ್ಲಿದ್ದರು. ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಲಯ, ಶಂಕರಮೂರ್ತಿ, ರವಿಕುಮಾರ್, ಶಬ್ಬೀರ್ ಅಹಮ್ಮದ್ ಹಾಗೂ ಡಿ. ಶ್ರೀರಾಮ್ ಅವರನ್ನು ಪೊಲೀಸರ ಕಸ್ಟಡಿಗೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಕಲಿ ಖಚಿತ ಅಳತೆ ವರದಿ (ಸಿಡಿಆರ್) ಸೃಷ್ಟಿಸಿ ಬಡಾವಣೆ ಯೋಜನೆಗಳಿಗೆ ಅನುಮತಿ ನೀಡಿದ್ದ, ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಸಹಕರಿಸುತ್ತಿದ್ದ ಆರೋಪದಡಿ ಬಂಧಿಸಲಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಾಲ್ವರು ಸಹಾಯಕ ಎಂಜಿನಿಯರ್ಗಳನ್ನು ಹೆಚ್ಚಿನ ವಿಚಾರಣೆಗಾಗಿ ಶೇಷಾದ್ರಿಪುರ ಪೊಲೀಸರ ಕಸ್ಟಡಿಗೆ ನೀಡಲಾಗಿದೆ.</p>.<p>ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬನಶಂಕರಿ ಕಚೇರಿಯ ಎಂ.ಎಸ್. ಶಂಕರ್ ಮೂರ್ತಿ, ಆರ್.ಟಿ.ನಗರ ಕಚೇರಿಯ ಕೆ.ಎನ್. ರವಿಕುಮಾರ್, ಡಿ. ಶ್ರೀರಾಮ್, ಶಬ್ಬೀರ್ ಅಹಮ್ಮದ್ ಹಾಗೂ ಶ್ರೀನಿವಾಸ್ ಅವರನ್ನು ಬಂಧಿಸಿದ್ದರು. ಆರಂಭದಲ್ಲಿ ಶ್ರೀನಿವಾಸ್ ಅವರನ್ನು ಮಾತ್ರ ಕಸ್ಡಡಿಗೆ ಪಡೆದು ವಿಚಾರಣೆ ನಡೆಸಿದ್ದರು.</p>.<p>ಆದರೆ, ಉಳಿದ ನಾಲ್ವರು ನ್ಯಾಯಾಂಗ ಬಂಧನದಲ್ಲಿದ್ದರು. ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಲಯ, ಶಂಕರಮೂರ್ತಿ, ರವಿಕುಮಾರ್, ಶಬ್ಬೀರ್ ಅಹಮ್ಮದ್ ಹಾಗೂ ಡಿ. ಶ್ರೀರಾಮ್ ಅವರನ್ನು ಪೊಲೀಸರ ಕಸ್ಟಡಿಗೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>