<p><strong>ಬೆಂಗಳೂರು: </strong>ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಪ್ರತಿಮೆ ವಿಧಾನಸೌಧ ಆವರಣದಲ್ಲಿ ಮರು ಸ್ಥಾಪಿಸುವ ವಿಚಾರದಲ್ಲಿ ಸರ್ಕಾರ ಮಾತು ತಪ್ಪಿದೆ ಎಂದು ಕಾಂಗ್ರೆಸ್ ಸದಸ್ಯ ಕೆ. ಗೋವಿಂದರಾಜ್ ವಿಧಾನ ಪರಿಷತ್ನಲ್ಲಿ ಹಕ್ಕುಚ್ಯುತಿ ಮಂಡಿಸಿದರು.</p>.<p>‘ನಮ್ಮ ಮೆಟ್ರೊ ಕಾಮಗಾರಿ ಸಂದರ್ಭದಲ್ಲಿ ನೆಹರೂ ಅವರ ಪ್ರತಿಮೆಯನ್ನು ಮೂಲಸ್ಥಳದಿಂದ ಬೇರೆಗೆ ಸ್ಥಳಾಂತರಿಸಲಾಗಿತ್ತು. ಕಾಮಗಾರಿ ಮುಗಿದು ವರ್ಷಗಳೇ ಆಗಿವೆ. ಪ್ರತಿಮೆಯನ್ನು 2020ರ ನವೆಂಬರ್ 14ರೊಳಗೆ ಮೂಲಸ್ಥಳಕ್ಕೆ ಸ್ಥಳಾಂತರಿಸುವುದಾಗಿ ಕಳೆದ ಅಧಿವೇಶನದಲ್ಲಿಯೇ ಸರ್ಕಾರ ಹೇಳಿತ್ತು. ಈವರೆಗೆ ಆ ಕೆಲಸ ಆಗಿಲ್ಲ. ಸದನದಲ್ಲಿ ಕೊಟ್ಟ ಭರವಸೆ ಈಡೇರಿಸಿದೆ ಹಕ್ಕುಚ್ಯುತಿ ಉಂಟು ಮಾಡಲಾಗಿದೆ’ ಎಂದು ಅವರು ಆರೋಪಿಸಿದರು.</p>.<p>ಈ ವಿಚಾರವನ್ನು ಹಕ್ಕು ಬಾಧ್ಯತಾ ಸಮಿತಿಗೆ ವಹಿಸಬೇಕು ಎಂದು ಒತ್ತಾಯಿಸಿದರು.</p>.<p>ಹಕ್ಕುಬಾಧ್ಯತಾ ಸಮಿತಿಗೆ ವಹಿಸುವುದಾಗಿ ಸಭಾಪತಿ ಭರವಸೆ ನೀಡಿದರು. ಇದಕ್ಕೆ ಅಗತ್ಯವಿರುವ ಮಾಹಿತಿಗಾಗಿ ಕಲಾಪದ ದಾಖಲೆ ಇಲ್ಲವೇ ಮಾಧ್ಯಮಗಳ ವರದಿ ಆಧರಿಸಿ ಕೂಲಂಕಷ ತನಿಖೆ ನಡೆಸಿ ಎಂದು ಸೂಚಿಸಿ, ಕಲಾಪವನ್ನು ಬುಧವಾರ ಬೆಳಿಗ್ಗೆ 11ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಪ್ರತಿಮೆ ವಿಧಾನಸೌಧ ಆವರಣದಲ್ಲಿ ಮರು ಸ್ಥಾಪಿಸುವ ವಿಚಾರದಲ್ಲಿ ಸರ್ಕಾರ ಮಾತು ತಪ್ಪಿದೆ ಎಂದು ಕಾಂಗ್ರೆಸ್ ಸದಸ್ಯ ಕೆ. ಗೋವಿಂದರಾಜ್ ವಿಧಾನ ಪರಿಷತ್ನಲ್ಲಿ ಹಕ್ಕುಚ್ಯುತಿ ಮಂಡಿಸಿದರು.</p>.<p>‘ನಮ್ಮ ಮೆಟ್ರೊ ಕಾಮಗಾರಿ ಸಂದರ್ಭದಲ್ಲಿ ನೆಹರೂ ಅವರ ಪ್ರತಿಮೆಯನ್ನು ಮೂಲಸ್ಥಳದಿಂದ ಬೇರೆಗೆ ಸ್ಥಳಾಂತರಿಸಲಾಗಿತ್ತು. ಕಾಮಗಾರಿ ಮುಗಿದು ವರ್ಷಗಳೇ ಆಗಿವೆ. ಪ್ರತಿಮೆಯನ್ನು 2020ರ ನವೆಂಬರ್ 14ರೊಳಗೆ ಮೂಲಸ್ಥಳಕ್ಕೆ ಸ್ಥಳಾಂತರಿಸುವುದಾಗಿ ಕಳೆದ ಅಧಿವೇಶನದಲ್ಲಿಯೇ ಸರ್ಕಾರ ಹೇಳಿತ್ತು. ಈವರೆಗೆ ಆ ಕೆಲಸ ಆಗಿಲ್ಲ. ಸದನದಲ್ಲಿ ಕೊಟ್ಟ ಭರವಸೆ ಈಡೇರಿಸಿದೆ ಹಕ್ಕುಚ್ಯುತಿ ಉಂಟು ಮಾಡಲಾಗಿದೆ’ ಎಂದು ಅವರು ಆರೋಪಿಸಿದರು.</p>.<p>ಈ ವಿಚಾರವನ್ನು ಹಕ್ಕು ಬಾಧ್ಯತಾ ಸಮಿತಿಗೆ ವಹಿಸಬೇಕು ಎಂದು ಒತ್ತಾಯಿಸಿದರು.</p>.<p>ಹಕ್ಕುಬಾಧ್ಯತಾ ಸಮಿತಿಗೆ ವಹಿಸುವುದಾಗಿ ಸಭಾಪತಿ ಭರವಸೆ ನೀಡಿದರು. ಇದಕ್ಕೆ ಅಗತ್ಯವಿರುವ ಮಾಹಿತಿಗಾಗಿ ಕಲಾಪದ ದಾಖಲೆ ಇಲ್ಲವೇ ಮಾಧ್ಯಮಗಳ ವರದಿ ಆಧರಿಸಿ ಕೂಲಂಕಷ ತನಿಖೆ ನಡೆಸಿ ಎಂದು ಸೂಚಿಸಿ, ಕಲಾಪವನ್ನು ಬುಧವಾರ ಬೆಳಿಗ್ಗೆ 11ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>