‘ಐದು ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು. ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಸಭೆ ನಡೆಸಬಾರದು. ಶಸ್ತಾಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಚಾಕು ಹಾಗೂ ಇತರ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಓಡಾಡಬಾರದು. ವ್ಯಕ್ತಿಗಳ ಪ್ರತಿಕೃತಿ ದಹನ, ಭಿತ್ತಿಪತ್ರ ಪ್ರದರ್ಶನ ಮಾಡಬಾರದು’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.