ರಾಜ್ಯಕ್ಕೆ ಬರುವ ಮೊದಲೇ ಸೇವಾ ಸಿಂಧು ಪೋರ್ಟಲ್ನಲ್ಲಿ ಸ್ವಯಂ ವಿವರ ಹಾಗೂ ಪ್ರಯಾಣದ ಮಾಹಿತಿ ನಮೂದಿಸಬೇಕು. ವಿಮಾನ ನಿಲ್ದಾಣ, ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿಯೇ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತದೆ. ಸೋಂಕು ಲಕ್ಷಣಗಳು ಇದ್ದಲ್ಲಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಇಲ್ಲವಾದಲ್ಲಿ ಮನೆಯಲ್ಲಿಯೇ ಕ್ವಾರಂಟೈನ್ಗೆ ಒಳಗಾಗಬಹುದಾಗಿದೆ. ವ್ಯಾಪಾರ ವ್ಯವಹಾರದ ಸಂಬಂಧ ಭೇಟಿ ನೀಡುವವರು ಹೋಂ ಕ್ವಾರಂಟೈನ್ಗೆ ಒಳಪಡಬೇಕಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.