<p><strong>ಬೆಂಗಳೂರು:</strong> ಸಾರ್ವಜನಿಕರಲ್ಲಿ ಸೇವಾ ಮನೋಭಾವ ಹೆಚ್ಚಿಸುವ ಉದ್ದೇಶದಿಂದ ಹಿಂದು ಸೇವಾ ಪ್ರತಿಷ್ಠಾನವುಇದೇ 15ರಂದು ‘ಸೇವಾಥಾನ್’ ಕಾರ್ಯಕ್ರಮ ಏರ್ಪಡಿಸಿದೆ.</p>.<p>ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 6.30ರಿಂದ ನಡೆಯುವ ಈ ಕಾರ್ಯಕ್ರಮದಲ್ಲಿ 5 ಕಿ.ಮೀ ಹಾಗೂ 2 ಕಿ.ಮೀ ನಡಿಗೆ ಇರಲಿದೆ ಎಂದು ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಸುರೇಶ್ ತಿಳಿಸಿದರು.</p>.<p>ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಸೇವಾಥಾನ್ನಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ತೇಜಸ್ವಿ ಸೂರ್ಯ, ಶಾಸಕ ಉದಯ್ ಬಿ.ಗರುಡಾಚಾರ್, ಮೇಯರ್ ಎಂ.ಗೌತಮ್ ಕುಮಾರ್, ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭಾಗವಹಿಸಲಿದ್ದಾರೆ’ ಎಂದರು.</p>.<p>‘1990ರಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾದಹಿಂದು ಸೇವಾ ಪ್ರತಿಷ್ಠಾನದ ಸ್ಥಾಪಕ ಅಜಿತ್ ಕುಮಾರ್ ಅವರ ಸ್ಮರಣಾರ್ಥ ಪ್ರತಿವರ್ಷ ಸೇವಾ ದಿನ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಆರ್.ವಿ. ದಂತ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಬೆಳಗಾವಿಯ ಸಫಲಾ ನಾಗರತ್ನ, ಮಳವಳ್ಳಿಯ ಕಾಮೇಗೌಡ ಹಾಗೂ ಬೆಂಗಳೂರಿನ ಗೀತಾ ಅವರನ್ನು ಸನ್ಮಾನಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರ್ವಜನಿಕರಲ್ಲಿ ಸೇವಾ ಮನೋಭಾವ ಹೆಚ್ಚಿಸುವ ಉದ್ದೇಶದಿಂದ ಹಿಂದು ಸೇವಾ ಪ್ರತಿಷ್ಠಾನವುಇದೇ 15ರಂದು ‘ಸೇವಾಥಾನ್’ ಕಾರ್ಯಕ್ರಮ ಏರ್ಪಡಿಸಿದೆ.</p>.<p>ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 6.30ರಿಂದ ನಡೆಯುವ ಈ ಕಾರ್ಯಕ್ರಮದಲ್ಲಿ 5 ಕಿ.ಮೀ ಹಾಗೂ 2 ಕಿ.ಮೀ ನಡಿಗೆ ಇರಲಿದೆ ಎಂದು ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಸುರೇಶ್ ತಿಳಿಸಿದರು.</p>.<p>ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಸೇವಾಥಾನ್ನಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ತೇಜಸ್ವಿ ಸೂರ್ಯ, ಶಾಸಕ ಉದಯ್ ಬಿ.ಗರುಡಾಚಾರ್, ಮೇಯರ್ ಎಂ.ಗೌತಮ್ ಕುಮಾರ್, ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭಾಗವಹಿಸಲಿದ್ದಾರೆ’ ಎಂದರು.</p>.<p>‘1990ರಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾದಹಿಂದು ಸೇವಾ ಪ್ರತಿಷ್ಠಾನದ ಸ್ಥಾಪಕ ಅಜಿತ್ ಕುಮಾರ್ ಅವರ ಸ್ಮರಣಾರ್ಥ ಪ್ರತಿವರ್ಷ ಸೇವಾ ದಿನ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಆರ್.ವಿ. ದಂತ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಬೆಳಗಾವಿಯ ಸಫಲಾ ನಾಗರತ್ನ, ಮಳವಳ್ಳಿಯ ಕಾಮೇಗೌಡ ಹಾಗೂ ಬೆಂಗಳೂರಿನ ಗೀತಾ ಅವರನ್ನು ಸನ್ಮಾನಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>