ಪಿಯುಸಿಎಲ್, ರಾಷ್ಟ್ರೀಯ ಜನಾಂದೋಲನಗಳ ಮಹಾಮೈತ್ರಿ, ಬಹುತ್ವ ಕರ್ನಾಟಕ ಸೇರಿದಂತೆ 20ಕ್ಕೂ ಹೆಚ್ಚು ಸಂಘಟನೆಗಳು ಒಗ್ಗೂಡಿ ಈ ಅಭಿಯಾನ ಆರಂಭಿಸಿವೆ. ಚುನಾವಣಾ ಆಯೋಗ ನಿರ್ಲಕ್ಷ್ಯ ವಹಿಸಿದೆ ಎನ್ನಲಾದ ಪ್ರಕರಣಗಳ ಪಟ್ಟಿಯೊಂದಿಗೆ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ ಮೂಲಕ ಕೇಂದ್ರ ಚುನಾವಣಾ ಆಯುಕ್ತರಿಗೆ ಪತ್ರ ರವಾನಿಸಲಾಗಿದೆ.