ಈ ರಸ್ತೆಯಲ್ಲಿ ಹಗಲಿನ ವೇಳೆ ವಾಹನ ಸಂಚಾರ ದಟ್ಟಣೆ ಇರುವ ಕಾರಣಕ್ಕೆ ರಾತ್ರಿ ವೇಳೆ ಕಾಮಗಾರಿ ನಡೆಯುತ್ತಿತ್ತು. ಮಾಹಿತಿ ಸಿಕ್ಕಿದ ತಕ್ಷಣ ಯಶವಂತಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲದೆ, ಯಶವಂತಪುರ ಮತ್ತು ರಾಜಾಜಿನಗರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡಗಳು ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸಿದ್ದವು.