<p><strong>ಬೆಂಗಳೂರು:</strong> ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಔರಾದ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವಾಣ್ ಅವರ ಪುತ್ರ ಪ್ರತೀಕ್ ಚವಾಣ್ ವಿರುದ್ಧ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.</p>.<p>ಇದೇ ಪ್ರಕರಣದ ಸಂಬಂಧ ಬೀದರ್ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 20ರಂದು ಪ್ರತೀಕ್ ವಿರುದ್ಧ ಪ್ರಕರಣ ದಾಖಲಾಗಿತ್ತು.</p>.<p>‘ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಹೋಟೆಲ್ವೊಂದರಲ್ಲಿ ಪ್ರತೀಕ್ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದರು. ಬೀದರ್ನಲ್ಲಿ ದಾಖಲಾಗದ ಪ್ರಕರಣವನ್ನು ಉಪ್ಫಾರಪೇಟೆಗೆ ವರ್ಗಾವಣೆ ಮಾಡಲಾಗಿದ್ದು, ಈ ಠಾಣೆಯಲ್ಲೂ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>ಮಹಾರಾಷ್ಟ್ರದ ಉದಗೀರ್ ಸಮೀಪದ ಹಣೆಗಾಂವ್ ತಾಂಡಾದ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುವುದಕ್ಕೂ ಮುನ್ನ ಸಂತ್ರಸ್ತೆ ಹಾಗೂ ಅವರ ತಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಬೆಳಿಗ್ಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>‘2023ರ ಡಿಸೆಂಬರ್ 25ರಂದು ಔರಾದ ತಾಲ್ಲೂಕಿನ ಘಮಸುಬಾಯಿ ಬೊಂತಿ ತಾಂಡಾದಲ್ಲಿ ಶಾಸಕ ಪ್ರಭು ಚವಾಣ್ ಅವರ ಪುತ್ರ ಪ್ರತೀಕ್ ಜತೆ ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥವಾಗಿತ್ತು. ನಂತರ, ಇಬ್ಬರೂ ನಾನಾ ಕಡೆ ಸುತ್ತಾಡಿದ್ದೇವೆ. ಈ ವೇಳೆ ಪ್ರತೀಕ್ ನನ್ನ ಮೇಲೆ ಬಲವಂತದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಂತರ ಮೋಸ ಮಾಡಿದ್ದಾರೆ’ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಔರಾದ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವಾಣ್ ಅವರ ಪುತ್ರ ಪ್ರತೀಕ್ ಚವಾಣ್ ವಿರುದ್ಧ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.</p>.<p>ಇದೇ ಪ್ರಕರಣದ ಸಂಬಂಧ ಬೀದರ್ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 20ರಂದು ಪ್ರತೀಕ್ ವಿರುದ್ಧ ಪ್ರಕರಣ ದಾಖಲಾಗಿತ್ತು.</p>.<p>‘ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಹೋಟೆಲ್ವೊಂದರಲ್ಲಿ ಪ್ರತೀಕ್ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದರು. ಬೀದರ್ನಲ್ಲಿ ದಾಖಲಾಗದ ಪ್ರಕರಣವನ್ನು ಉಪ್ಫಾರಪೇಟೆಗೆ ವರ್ಗಾವಣೆ ಮಾಡಲಾಗಿದ್ದು, ಈ ಠಾಣೆಯಲ್ಲೂ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>ಮಹಾರಾಷ್ಟ್ರದ ಉದಗೀರ್ ಸಮೀಪದ ಹಣೆಗಾಂವ್ ತಾಂಡಾದ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುವುದಕ್ಕೂ ಮುನ್ನ ಸಂತ್ರಸ್ತೆ ಹಾಗೂ ಅವರ ತಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಬೆಳಿಗ್ಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>‘2023ರ ಡಿಸೆಂಬರ್ 25ರಂದು ಔರಾದ ತಾಲ್ಲೂಕಿನ ಘಮಸುಬಾಯಿ ಬೊಂತಿ ತಾಂಡಾದಲ್ಲಿ ಶಾಸಕ ಪ್ರಭು ಚವಾಣ್ ಅವರ ಪುತ್ರ ಪ್ರತೀಕ್ ಜತೆ ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥವಾಗಿತ್ತು. ನಂತರ, ಇಬ್ಬರೂ ನಾನಾ ಕಡೆ ಸುತ್ತಾಡಿದ್ದೇವೆ. ಈ ವೇಳೆ ಪ್ರತೀಕ್ ನನ್ನ ಮೇಲೆ ಬಲವಂತದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಂತರ ಮೋಸ ಮಾಡಿದ್ದಾರೆ’ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>