<p><strong>ಬೆಂಗಳೂರು:</strong> ಕಾಸರಗೋಡಿನ ಯುವತಿ ಮೇಲೆ ನಡೆದ ದೌರ್ಜನ್ಯ ಪ್ರಕರಣವನ್ನು ಸಿಐಡಿಗೆ ವಹಿಸಬೇಕು ಎಂದು ಆಗ್ರಹಿಸಿ ಸಂಸದೆ ಶೋಭ ಕರಂದ್ಲಾಜೆ ಡಿಜಿಪಿ ನೀಲಮಣಿರಾಜು ಅವರಿಗೆ ಸೋಮವಾರ ದೂರು ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ಆರೋಪಿಗಳು ಯುವತಿ ಮೇಲೆ ಬೆಂಗಳೂರು, ಮಂಗಳೂರು, ಕಾಸರಗೋಡಿನಲ್ಲಿ ದೌರ್ಜನ್ಯ ಎಸಗಿದ್ದಾರೆ. ಬೆಂಗಳೂರು ಮೀರಿ ಹೊರ ವ್ಯಾಪ್ತಿಯಲ್ಲಿ ಕೃತ್ಯ ನಡೆದಿರುವುದರಿಂದ ಪ್ರಕರಣವನ್ನು ಬೆಂಗಳೂರು ಪೊಲೀಸರಿಂದ ತನಿಖೆ ನಡೆಸಲು ಸಾಧ್ಯವಿಲ್ಲ ಎಂದರು.</p>.<p>ಆರೋಪಿಗಳು ಯುವತಿ ಕುಟುಂಬವನ್ನು ಮತಾಂತರಕ್ಕೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಶಂಕಿತ ಉಗ್ರರ ಬಂಧನವಾಗಿದೆ. ಆದ್ದರಿಂದ ಈ ಕೃತ್ಯ ಹಾಗೂ ಮತಾಂತರದ ಹಿಂದೆ ದೊಡ್ಡ ಸಂಚಿರುವ ಅನುಮಾನವಿದೆ ಎಂದರು</p>.<p>ಮತಾಂತರ ಯತ್ನ ಮತ್ತು ದೌರ್ಜನ್ಯ ಬಗ್ಗೆ ವಿಸೃತ ತನಿಖೆ ಆಗಬೇಕು. ಈ ಕಾರಣಕ್ಕೆ ಸಿಐಡಿ ಡಿಜಿ ಪ್ರವೀಣ್ ಸೂದ್ ಮತ್ತು ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಸರಗೋಡಿನ ಯುವತಿ ಮೇಲೆ ನಡೆದ ದೌರ್ಜನ್ಯ ಪ್ರಕರಣವನ್ನು ಸಿಐಡಿಗೆ ವಹಿಸಬೇಕು ಎಂದು ಆಗ್ರಹಿಸಿ ಸಂಸದೆ ಶೋಭ ಕರಂದ್ಲಾಜೆ ಡಿಜಿಪಿ ನೀಲಮಣಿರಾಜು ಅವರಿಗೆ ಸೋಮವಾರ ದೂರು ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ಆರೋಪಿಗಳು ಯುವತಿ ಮೇಲೆ ಬೆಂಗಳೂರು, ಮಂಗಳೂರು, ಕಾಸರಗೋಡಿನಲ್ಲಿ ದೌರ್ಜನ್ಯ ಎಸಗಿದ್ದಾರೆ. ಬೆಂಗಳೂರು ಮೀರಿ ಹೊರ ವ್ಯಾಪ್ತಿಯಲ್ಲಿ ಕೃತ್ಯ ನಡೆದಿರುವುದರಿಂದ ಪ್ರಕರಣವನ್ನು ಬೆಂಗಳೂರು ಪೊಲೀಸರಿಂದ ತನಿಖೆ ನಡೆಸಲು ಸಾಧ್ಯವಿಲ್ಲ ಎಂದರು.</p>.<p>ಆರೋಪಿಗಳು ಯುವತಿ ಕುಟುಂಬವನ್ನು ಮತಾಂತರಕ್ಕೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಶಂಕಿತ ಉಗ್ರರ ಬಂಧನವಾಗಿದೆ. ಆದ್ದರಿಂದ ಈ ಕೃತ್ಯ ಹಾಗೂ ಮತಾಂತರದ ಹಿಂದೆ ದೊಡ್ಡ ಸಂಚಿರುವ ಅನುಮಾನವಿದೆ ಎಂದರು</p>.<p>ಮತಾಂತರ ಯತ್ನ ಮತ್ತು ದೌರ್ಜನ್ಯ ಬಗ್ಗೆ ವಿಸೃತ ತನಿಖೆ ಆಗಬೇಕು. ಈ ಕಾರಣಕ್ಕೆ ಸಿಐಡಿ ಡಿಜಿ ಪ್ರವೀಣ್ ಸೂದ್ ಮತ್ತು ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>