‘ವಿವಾದಿತ ಜಾಗದ ಪಕ್ಕದಲ್ಲೇ ಉದ್ಯಾನವಿದ್ದು, ಈ ಹಿಂದೆಯೇ ಅಲ್ಲೊಂದು ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಲಾಗಿದೆ. ಅಷ್ಟಾದರೂ ಭಾನುವಾರ ಬೆಳಿಗ್ಗೆ ವಿವಾದಿತ ಜಾಗದ ರಸ್ತೆಯ ಮಧ್ಯದಲ್ಲೇ ಮತ್ತೊಂದು ಪ್ರತಿಮೆ ನಿಲ್ಲಿಸಲಾಗಿದೆ. ಅದನ್ನು ಪ್ರಶ್ನಿಸಿದ ಸ್ಥಳೀಯ ಯುವತಿ, ಮೊಬೈಲ್ನಲ್ಲಿ ಪ್ರತಿಮೆಯ ವಿಡಿಯೊ ಮಾಡುತ್ತಿದ್ದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆರೋಪಿ ಹಾಗೂ ಸಹಚರರು, ಯುವತಿಯನ್ನು ರಸ್ತೆಯಲ್ಲೇ ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮೊಬೈಲ್ ಕಸಿದುಕೊಂಡು ಹಲ್ಲೆಗೂ ಯತ್ನಿಸಿದ್ದಾರೆ. ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ’.