‘ಉದ್ಯಮಿ ಆಗಿರುವ ಆರೋಪಿ, ತಮಿಳುನಾಡಿನಿಂದ ಇತ್ತೀಚೆಗೆ ನಗರಕ್ಕೆ ಬಂದಿದ್ದ. ಸಂಬಂಧಿಕರೊಬ್ಬರ ಮೂಲಕ ಯುವತಿಯನ್ನು ಸಂಪರ್ಕಿಸಿದ್ದ ಈತ, ಉದ್ಯಮ ಅಭಿವೃದ್ಧಿ ಬಗ್ಗೆ ಮಾತನಾಡಬೇಕೆಂದು ಹೇಳಿ ಆಗಸ್ಟ್ 6ರಂದು ಹೋಟೆಲ್ಗೆ ಕರೆಸಿಕೊಂಡಿದ್ದ. ಇದೇ ವೇಳೆ ಯುವತಿ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ, ಜೀವ ಬೆದರಿಕೆಯೊಡ್ಡಿದ್ದ. ಆತನಿಂದ ತಪ್ಪಿಸಿಕೊಂಡಿದ್ದ ಯುವತಿ, ಸಂಬಂಧಿಕರಿಗೆ ವಿಷಯ ತಿಳಿಸಿದ್ದರು. ನಂತರವೇ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.