‘ಸುದ್ದಿ ವಾಹಿನಿಗೆ ಸೇರುವ ಮೊದಲು ಯುವತಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸದಲ್ಲಿದ್ದಳು. ನಿತ್ಯ ಕರೆ ಮಾಡುತ್ತಿದ್ದ ಆರೋಪಿ, ‘ನೀನು ನನ್ನನ್ನು ಮದುವೆಯಾಗಬೇಕು. ಇಲ್ಲದಿದ್ದರೆ ನಿನ್ನನ್ನು ಕೊಲ್ಲುತ್ತೇನೆ’ ಎಂದು ಬೆದರಿಸುತ್ತಿದ್ದ. ಕಿರುಕುಳ ಸಹಿಸಲು ಸಾಧ್ಯವಾಗದೆ ಮೈಸೂರಿನ ಉದಯಗಿರಿ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು. ಆಗ, ಮತ್ತೊಮ್ಮೆ ಆ ರೀತಿ ಮಾಡುವುದಿಲ್ಲ ಎಂದಿದ್ದ ಆರೋಪಿ, ಡಿಸೆಂಬರ್ನಲ್ಲಿ ಮತ್ತೆ ತನ್ನ ಚಾಳಿ ಮುಂದುವರಿಸಿದ್ದ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.