ಸೇತುವೆ ಉದ್ಘಾಟನೆ ಸಂದರ್ಭದಲ್ಲಿ ಈ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಮುಖ್ಯಮಂತ್ರಿ ನಿರ್ಗಮಿಸಿದ ಅರ್ಧ ಗಂಟೆ ಬಳಿಕ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಸೋಮವಾರ ಮಧ್ಯಾಹ್ನ 12ರವರೆಗೂ ನಿರ್ಬಂಧ ಮುಂದುವರಿದಿತ್ತು. ಈ ಬಗ್ಗೆ ವಾಹನ ಸವಾರರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬಿಡಿಎ ಅಧಿಕಾರಿಗಳು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.