<p><strong>ಬೆಂಗಳೂರು:</strong> ‘ದೇಶದಲ್ಲಿ ಬೇರು ಬಿಟ್ಟಿರುವ ಜಾತಿ ಪದ್ಧತಿ ಗೆದ್ದಲು ಉಳುವಿನಂತೆ ಇಡೀ ದೇಶವನ್ನೇ ಹಾಳು ಮಾಡುತ್ತಿದೆ’ ಎಂದು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.</p>.<p>ದಲಿತ ಚೇತನ ಪ್ರೊ.ಬಿ.ಕೃಷ್ಣಪ್ಪ ಅವರ 84ನೇ ಜನ್ಮದಿನದ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬುಧವಾರ ಏರ್ಪಡಿಸಿದ್ದ ಅಸಮಾನತೆ ಮುಕ್ತ-ಸೌಹಾರ್ದ ಭಾರತಕ್ಕಾಗಿ ಸಂಕಲ್ಪದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಾತಿ ಮುಕ್ತ ಬಹುತ್ವ ಭಾರತ ನಿರ್ಮಾಣ ಮಾಡಲು ನೈತಿಕ ಎಚ್ಚರ ಇರಬೇಕು. ಅಂಬೇಡ್ಕರ್ ಚಿಂತನೆಗಳನ್ನು ಆಳವಾಗಿ ಅಳವಡಿಸಿಕೊಳ್ಳಬೇಕು. ಆದರೆ, ಕೆಲ ಅಕ್ಷರಸ್ಥರು ವ್ಯವಸ್ಥೆಯ ಪರವಾಗಿದ್ದುಕೊಂಡು ಚಳವಳಿಗಳನ್ನು ನಾಶ ಮಾಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ‘ಕೃಷ್ಣಪ್ಪ ಅವರ ಇಡೀ ಜೀವನ ಹೋರಾಟ ಮತ್ತು ಸಂಘರ್ಷದಿಂದ ಕೂಡಿತ್ತು. ಅವರ ಚಿಂತನೆ ಮತ್ತು ಹೋರಾಟದ ಮಾರ್ಗವನ್ನು ನಾವು ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಸಂವಿಧಾನವನ್ನು ಉಳಿಸಿಕೊಳ್ಳುವ ದೊಡ್ಡ ಸವಾಲು ನಮ್ಮ ಮುಂದಿದೆ. ನ್ಯಾಯಾಲಯಗಳ ತೀರ್ಪು ಸಹ ಇಂದು ಆತಂಕಕಾರಿ ಆಗಿದೆ. ಈ ಸಂದರ್ಭದಲ್ಲಿ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುವ ಅಗತ್ಯವಿದೆ’ ಎಂದರು. ಇಂದಿರಾ ಕೃಷ್ಣಪ್ಪ, ರುದ್ರಪ್ಪ ಹನಗವಾಡಿ, ಮಲ್ಲೇಶ್ ಅಂಬುಗ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದೇಶದಲ್ಲಿ ಬೇರು ಬಿಟ್ಟಿರುವ ಜಾತಿ ಪದ್ಧತಿ ಗೆದ್ದಲು ಉಳುವಿನಂತೆ ಇಡೀ ದೇಶವನ್ನೇ ಹಾಳು ಮಾಡುತ್ತಿದೆ’ ಎಂದು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.</p>.<p>ದಲಿತ ಚೇತನ ಪ್ರೊ.ಬಿ.ಕೃಷ್ಣಪ್ಪ ಅವರ 84ನೇ ಜನ್ಮದಿನದ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬುಧವಾರ ಏರ್ಪಡಿಸಿದ್ದ ಅಸಮಾನತೆ ಮುಕ್ತ-ಸೌಹಾರ್ದ ಭಾರತಕ್ಕಾಗಿ ಸಂಕಲ್ಪದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಾತಿ ಮುಕ್ತ ಬಹುತ್ವ ಭಾರತ ನಿರ್ಮಾಣ ಮಾಡಲು ನೈತಿಕ ಎಚ್ಚರ ಇರಬೇಕು. ಅಂಬೇಡ್ಕರ್ ಚಿಂತನೆಗಳನ್ನು ಆಳವಾಗಿ ಅಳವಡಿಸಿಕೊಳ್ಳಬೇಕು. ಆದರೆ, ಕೆಲ ಅಕ್ಷರಸ್ಥರು ವ್ಯವಸ್ಥೆಯ ಪರವಾಗಿದ್ದುಕೊಂಡು ಚಳವಳಿಗಳನ್ನು ನಾಶ ಮಾಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ‘ಕೃಷ್ಣಪ್ಪ ಅವರ ಇಡೀ ಜೀವನ ಹೋರಾಟ ಮತ್ತು ಸಂಘರ್ಷದಿಂದ ಕೂಡಿತ್ತು. ಅವರ ಚಿಂತನೆ ಮತ್ತು ಹೋರಾಟದ ಮಾರ್ಗವನ್ನು ನಾವು ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಸಂವಿಧಾನವನ್ನು ಉಳಿಸಿಕೊಳ್ಳುವ ದೊಡ್ಡ ಸವಾಲು ನಮ್ಮ ಮುಂದಿದೆ. ನ್ಯಾಯಾಲಯಗಳ ತೀರ್ಪು ಸಹ ಇಂದು ಆತಂಕಕಾರಿ ಆಗಿದೆ. ಈ ಸಂದರ್ಭದಲ್ಲಿ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುವ ಅಗತ್ಯವಿದೆ’ ಎಂದರು. ಇಂದಿರಾ ಕೃಷ್ಣಪ್ಪ, ರುದ್ರಪ್ಪ ಹನಗವಾಡಿ, ಮಲ್ಲೇಶ್ ಅಂಬುಗ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>