<p><strong>ಬೆಂಗಳೂರು:</strong> ‘ಕನ್ನಡ ನಾಡು, ನುಡಿ, ಗಡಿ ವಿಚಾರ ಬಂದಾಗ ನಿಖರ, ನಿಷ್ಠುರವಾಗಿ ಮಾತನಾಡುತ್ತಿದ್ದ ಸಂಶೋಧಕ ಎಂ.ಚಿದಾನಂದಮೂರ್ತಿ ಅವರ ಹಲವು ಸಂಶೋಧನಾ ಕೃತಿಗಳು ಒಕ್ಕೂಟ ವ್ಯವಸ್ಥೆಗೆ ಅಪಾಯ ಬಂದ ಸಂದರ್ಭದಲ್ಲಿ ನೆರವಿಗೆ ಬರುತ್ತವೆ’ ಎಂದು ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಹೇಳಿದರು.</p>.<p>ಕನ್ನಡ ಗೆಳೆಯರ ಬಳಗ, ಕರ್ನಾಟಕ ವಿಕಾಸ ರಂಗ ಮತ್ತು ಸಪ್ನ ಪುಸ್ತಕ ಮಳಿಗೆ ಸಂಯುಕ್ತವಾಗಿ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ 'ಕನ್ನಡ- ಕನ್ನಡಿಗ- ಕರ್ನಾಟಕ' ಕೃತಿಯ ಪರಿಷ್ಕೃತ 17ನೇ ಮುದ್ರಣದ ಜನಾರ್ಪಣೆ, ಚಿದಾನಂದಮೂರ್ತಿ ಸ್ಮರಣೆ ಮತ್ತು ಎಸ್.ಎಲ್.ಭೈರಪ್ಪ ನೆನಪು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರಾಮಾಣಿಕ ಸಂಶೋಧನೆಗೆ ಹೆಸರಾಗಿದ್ದ ಎಂ. ಚಿದಾನಂದಮೂರ್ತಿ ಅವರು ಗುರುವಿನ ಸ್ಥಾನದ ಮೌಲ್ಯಗಳ ಮೂರ್ತರೂಪದಂತೆ ಬಾಳಿ ಬದುಕಿದರು. ಅಧಿಕಾರ, ಪ್ರಶಸ್ತಿ ಬಯಸಿ ಎಂದೂ ಹೋದವರಲ್ಲ. ಈ ಕಾರಣದಿಂದಲೇ ಅವರು ಗೌರವ ಉಳಿಸಿಕೊಂಡಿದ್ದಾರೆ’ ಎಂದರು.</p>.<p>ಸಂಶೋಧಕ ಆರ್. ಶೇಷಶಾಸ್ತ್ರಿ ಮಾತನಾಡಿ, ‘ಚಿದಾನಂದಮೂರ್ತಿ ಖಚಿತ ಪುರಾವೆಗಳನ್ನು ಆಧರಿಸಿ ಸಂಶೋಧನೆ ನಡೆಸುತ್ತಿದ್ದರು. ಇಡೀ ಕರ್ನಾಟಕಕ್ಕೆ ಸಂಬಂಧಿಸಿದ ಬಹುಮುಖಿ ಧಾರೆಗಳ ಪರಿಪೂರ್ಣ ಗ್ರಂಥಾಲಯ ಸ್ಥಾಪಿಸಬೇಕು ಎಂಬ ಕನಸು ಹೊಂದಿದ್ದರು. ಅದನ್ನು ಸರ್ಕಾರ ಈಡೇರಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಅನುವಾದಕ ಬಿ. ಎಸ್. ಜಯಪ್ರಕಾಶ ನಾರಾಯಣ ಮಾತನಾಡಿ, ‘ಎಸ್.ಎಲ್.ಭೈರಪ್ಪ ಅವರು ನಂಬಿಕೆ, ಸಂಘರ್ಷ, ಅನುದಿನದ ಸಂಗತಿಗಳಿಗೆ ಗಂಭೀರ ತಾತ್ವಿಕತೆಯನ್ನು ತಮ್ಮ ಬರವಣಿಗೆ ಮೂಲಕ ಕಟ್ಟಿಕೊಡುತ್ತಿದ್ದರು. ಗ್ರಾಮೀಣ ಭಾಷೆಯ ಮೂಲಕವೇ ರಾಷ್ಟ್ರೀಯ ಸ್ತರದ ಪ್ರಜ್ಞೆಯನ್ನು ಸೃಷ್ಟಿಸಿದರು. ಲೇಖಕರನ್ನು ಎಡ-ಬಲ ತರಹದ ಚಿಂತನೆಗಳ ಸ್ವರೂಪದಲ್ಲಿ ನೋಡುವುದು ಸರಿಯಾದ ಕ್ರಮವಲ್ಲ’ ಎಂದು ಹೇಳಿದರು.</p>.<p>ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ. ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ, ಸಪ್ನ ಪುಸ್ತಕ ಮಳಿಗೆಯ ವ್ಯವಸ್ಥಾಪಕ ಆರ್.ದೊಡ್ಡೇಗೌಡ, ಕನ್ನಡ ಹೋರಾಟಗಾರ ಮ.ಚಂದ್ರಶೇಖರ್, ಕೆ.ಎನ್.ಭಗವಾನ್, ಬೆ.ರಾ.ನಾಗರಾಜ್, ರಮೇಶ್ ಬಾಬು, ಸುರೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕನ್ನಡ ನಾಡು, ನುಡಿ, ಗಡಿ ವಿಚಾರ ಬಂದಾಗ ನಿಖರ, ನಿಷ್ಠುರವಾಗಿ ಮಾತನಾಡುತ್ತಿದ್ದ ಸಂಶೋಧಕ ಎಂ.ಚಿದಾನಂದಮೂರ್ತಿ ಅವರ ಹಲವು ಸಂಶೋಧನಾ ಕೃತಿಗಳು ಒಕ್ಕೂಟ ವ್ಯವಸ್ಥೆಗೆ ಅಪಾಯ ಬಂದ ಸಂದರ್ಭದಲ್ಲಿ ನೆರವಿಗೆ ಬರುತ್ತವೆ’ ಎಂದು ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಹೇಳಿದರು.</p>.<p>ಕನ್ನಡ ಗೆಳೆಯರ ಬಳಗ, ಕರ್ನಾಟಕ ವಿಕಾಸ ರಂಗ ಮತ್ತು ಸಪ್ನ ಪುಸ್ತಕ ಮಳಿಗೆ ಸಂಯುಕ್ತವಾಗಿ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ 'ಕನ್ನಡ- ಕನ್ನಡಿಗ- ಕರ್ನಾಟಕ' ಕೃತಿಯ ಪರಿಷ್ಕೃತ 17ನೇ ಮುದ್ರಣದ ಜನಾರ್ಪಣೆ, ಚಿದಾನಂದಮೂರ್ತಿ ಸ್ಮರಣೆ ಮತ್ತು ಎಸ್.ಎಲ್.ಭೈರಪ್ಪ ನೆನಪು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರಾಮಾಣಿಕ ಸಂಶೋಧನೆಗೆ ಹೆಸರಾಗಿದ್ದ ಎಂ. ಚಿದಾನಂದಮೂರ್ತಿ ಅವರು ಗುರುವಿನ ಸ್ಥಾನದ ಮೌಲ್ಯಗಳ ಮೂರ್ತರೂಪದಂತೆ ಬಾಳಿ ಬದುಕಿದರು. ಅಧಿಕಾರ, ಪ್ರಶಸ್ತಿ ಬಯಸಿ ಎಂದೂ ಹೋದವರಲ್ಲ. ಈ ಕಾರಣದಿಂದಲೇ ಅವರು ಗೌರವ ಉಳಿಸಿಕೊಂಡಿದ್ದಾರೆ’ ಎಂದರು.</p>.<p>ಸಂಶೋಧಕ ಆರ್. ಶೇಷಶಾಸ್ತ್ರಿ ಮಾತನಾಡಿ, ‘ಚಿದಾನಂದಮೂರ್ತಿ ಖಚಿತ ಪುರಾವೆಗಳನ್ನು ಆಧರಿಸಿ ಸಂಶೋಧನೆ ನಡೆಸುತ್ತಿದ್ದರು. ಇಡೀ ಕರ್ನಾಟಕಕ್ಕೆ ಸಂಬಂಧಿಸಿದ ಬಹುಮುಖಿ ಧಾರೆಗಳ ಪರಿಪೂರ್ಣ ಗ್ರಂಥಾಲಯ ಸ್ಥಾಪಿಸಬೇಕು ಎಂಬ ಕನಸು ಹೊಂದಿದ್ದರು. ಅದನ್ನು ಸರ್ಕಾರ ಈಡೇರಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಅನುವಾದಕ ಬಿ. ಎಸ್. ಜಯಪ್ರಕಾಶ ನಾರಾಯಣ ಮಾತನಾಡಿ, ‘ಎಸ್.ಎಲ್.ಭೈರಪ್ಪ ಅವರು ನಂಬಿಕೆ, ಸಂಘರ್ಷ, ಅನುದಿನದ ಸಂಗತಿಗಳಿಗೆ ಗಂಭೀರ ತಾತ್ವಿಕತೆಯನ್ನು ತಮ್ಮ ಬರವಣಿಗೆ ಮೂಲಕ ಕಟ್ಟಿಕೊಡುತ್ತಿದ್ದರು. ಗ್ರಾಮೀಣ ಭಾಷೆಯ ಮೂಲಕವೇ ರಾಷ್ಟ್ರೀಯ ಸ್ತರದ ಪ್ರಜ್ಞೆಯನ್ನು ಸೃಷ್ಟಿಸಿದರು. ಲೇಖಕರನ್ನು ಎಡ-ಬಲ ತರಹದ ಚಿಂತನೆಗಳ ಸ್ವರೂಪದಲ್ಲಿ ನೋಡುವುದು ಸರಿಯಾದ ಕ್ರಮವಲ್ಲ’ ಎಂದು ಹೇಳಿದರು.</p>.<p>ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ. ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ, ಸಪ್ನ ಪುಸ್ತಕ ಮಳಿಗೆಯ ವ್ಯವಸ್ಥಾಪಕ ಆರ್.ದೊಡ್ಡೇಗೌಡ, ಕನ್ನಡ ಹೋರಾಟಗಾರ ಮ.ಚಂದ್ರಶೇಖರ್, ಕೆ.ಎನ್.ಭಗವಾನ್, ಬೆ.ರಾ.ನಾಗರಾಜ್, ರಮೇಶ್ ಬಾಬು, ಸುರೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>