ಸಾಹಿತಿ ಕೆ. ಮರುಳಸಿದ್ದಪ್ಪ, ‘ಕುವೆಂಪು ಅವರು ಕಾವ್ಯ, ನಾಟಕ, ಕಥೆ, ಕಾದಂಬರಿ ಸೇರಿ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ಸಾಹಿತ್ಯವು ವೈಚಾರಿಕ ಪ್ರಜ್ಞೆಯಿಂದ ಕೂಡಿರುತ್ತಿತ್ತು. ಅವರು ಕನ್ನಡಿಗರಲ್ಲಿ ವೈಚಾರಿಕ ಪ್ರಜ್ಞೆಯನ್ನು ಬೆಳೆಸಿದರು. ಅವರ ವಿಚಾರಗಳನ್ನು ಪುನರ್ಮನನ ಮಾಡಿಕೊಳ್ಳಬೇಕು. ಅವರು ಈ ನಾಡಿಗೆ ಶಕ್ತಿಯಾಗಿದ್ದರು’ ಎಂದು ಹೇಳಿದರು.