<p><strong>ಬೆಂಗಳೂರು</strong>: 'ಶಕ್ತಿ’ ಯೋಜನೆಯಡಿ ಸಾರಿಗೆ ನಿಗಮಗಳ ಬಸ್ಗಳಲ್ಲಿ 500 ಕೋಟಿ ಬಾರಿ ಮಹಿಳೆಯರು ಪ್ರಯಾಣಿಸಿರುವುದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.</p>.<p>ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಕೆಆರ್ಟಿಸಿ, ಕೆಕೆಆರ್ಟಿಸಿ ಆಡಳಿತ ಮಂಡಳಿ, ಅಧಿಕಾರಿಗಳು ಮತ್ತು ಸಿಬ್ಬಂದಿಯ ಪರಿಶ್ರಮ, ಪ್ರಾಮಾಣಿಕತೆ ಇದಕ್ಕೆ ಕಾರಣ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಯೋಜನೆ ಜಾರಿಗೊಳಿಸಿದ್ದರು ಎಂದು ಹೇಳಿದ್ದಾರೆ.</p>.<p>ಎರಡು ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಿಗೆ 5,800 ಹೊಸ ಬಸ್ಗಳ ಸೇರ್ಪಡೆ, 10,000 ಸಿಬ್ಬಂದಿ ನೇಮಕ, ಸಾಲ ಪಾವತಿಸಲು ಸರ್ಕಾರದಿಂದ ₹2,000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಸೇರಿದಂತೆ ಅನೇಕ ಬದಲಾವಣೆಗಳು ಆಗಿವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಕೆಎಸ್ಆರ್ಟಿಸಿಗೆ ಎರಡು ಪ್ರಶಸ್ತಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೈಗೊಂಡಿರುವ ಅತ್ಯುತ್ತಮ ನೇಮಕಾತಿ ಉಪಕ್ರಮಗಳಿಗಾಗಿ ಎರಡು ಪ್ರಶಸ್ತಿಗಳು ಬಂದಿವೆ.</p>.<p>‘ಅವಾರ್ಡ್ ಫಾರ್ ಇನ್ಸ್ಟಿಟ್ಯೂಷನ್ ಬಿಲ್ಡಿಂಗ್’, ‘ಬೆಸ್ಟ್ ಇನ್ಕ್ಲೂಷನ್ ರಿಕ್ರ್ಯೂಟ್ಮೆಂಟ್ ಪ್ರೋಗ್ರಾಂ’ ಪ್ರಶಸ್ತಿಗಳನ್ನು ಸಿಂಗಪುರದಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ಶಕ್ತಿ’ ಯೋಜನೆಯಡಿ ಸಾರಿಗೆ ನಿಗಮಗಳ ಬಸ್ಗಳಲ್ಲಿ 500 ಕೋಟಿ ಬಾರಿ ಮಹಿಳೆಯರು ಪ್ರಯಾಣಿಸಿರುವುದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.</p>.<p>ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಕೆಆರ್ಟಿಸಿ, ಕೆಕೆಆರ್ಟಿಸಿ ಆಡಳಿತ ಮಂಡಳಿ, ಅಧಿಕಾರಿಗಳು ಮತ್ತು ಸಿಬ್ಬಂದಿಯ ಪರಿಶ್ರಮ, ಪ್ರಾಮಾಣಿಕತೆ ಇದಕ್ಕೆ ಕಾರಣ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಯೋಜನೆ ಜಾರಿಗೊಳಿಸಿದ್ದರು ಎಂದು ಹೇಳಿದ್ದಾರೆ.</p>.<p>ಎರಡು ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಿಗೆ 5,800 ಹೊಸ ಬಸ್ಗಳ ಸೇರ್ಪಡೆ, 10,000 ಸಿಬ್ಬಂದಿ ನೇಮಕ, ಸಾಲ ಪಾವತಿಸಲು ಸರ್ಕಾರದಿಂದ ₹2,000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಸೇರಿದಂತೆ ಅನೇಕ ಬದಲಾವಣೆಗಳು ಆಗಿವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಕೆಎಸ್ಆರ್ಟಿಸಿಗೆ ಎರಡು ಪ್ರಶಸ್ತಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೈಗೊಂಡಿರುವ ಅತ್ಯುತ್ತಮ ನೇಮಕಾತಿ ಉಪಕ್ರಮಗಳಿಗಾಗಿ ಎರಡು ಪ್ರಶಸ್ತಿಗಳು ಬಂದಿವೆ.</p>.<p>‘ಅವಾರ್ಡ್ ಫಾರ್ ಇನ್ಸ್ಟಿಟ್ಯೂಷನ್ ಬಿಲ್ಡಿಂಗ್’, ‘ಬೆಸ್ಟ್ ಇನ್ಕ್ಲೂಷನ್ ರಿಕ್ರ್ಯೂಟ್ಮೆಂಟ್ ಪ್ರೋಗ್ರಾಂ’ ಪ್ರಶಸ್ತಿಗಳನ್ನು ಸಿಂಗಪುರದಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>