‘ಸಂದೇಶ ಬಂದ ಕೆಲ ಹೊತ್ತಿನ ನಂತರ ಬಿದರಿ ಅವರಿಗೆ ಕರೆ ಮಾಡಿದ್ದ ವಂಚಕರು, ಎಸ್ಬಿಐ ಸಹಾಯವಾಣಿ ಪ್ರತಿನಿಧಿ ಎಂಬುದಾಗಿ ಪರಿಚಯಿಸಿಕೊಂಡಿದ್ದರು. ‘ಪ್ಯಾನ್ ನಂಬರ್ ನವೀಕರಣ ಮಾಡುತ್ತಿದ್ದೇವೆ. ನಿಮ್ಮ ಮೊಬೈಲ್ಗೆ ಬಂದಿರುವ ಒಟಿಪಿ ತಿಳಿಸಿ’ ಎಂದಿದ್ದರು. ಅವರ ಮಾತು ನಂಬಿದ್ದ ಶಂಕರ್ ಬಿದರಿ, ಒಟಿಪಿ ಹಂಚಿಕೊಂಡಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ಬ್ಯಾಂಕ್ ಖಾತೆಯಿಂದ ₹ 89 ಸಾವಿರ ಕಡಿತವಾಗಿದೆ’ ಎಂದೂ ಮೂಲಗಳು ಹೇಳಿವೆ.