ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಂಕರ ಮಠ ವಾರ್ಡ್‌ ಸದಸ್ಯ ಶಿವರಾಜುಗೆ ಕೋವಿಡ್‌

Last Updated 11 ಆಗಸ್ಟ್ 2020, 7:29 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿಯ ಶಂಕರ ಮಠ ವಾರ್ಡ್‌ನ ಸದಸ್ಯ ಎಂ.ಶಿವರಾಜು ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಅವರು ನೆರವಾಗಿದ್ದರು. ವೈಯಕ್ತಿಕ ಸುರಕ್ಷತಾ ಸಾಧನಾ (ಪಿಪಿಇ) ಧರಿಸಿ ಸೋಂಕಿತರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಅವರು ಸಾರ್ವಜನಿಕರಲ್ಲಿ ಸ್ಥೈರ್ಯ ತುಂಬುವ ಪ್ರಯತ್ನ ಮಾಡಿದ್ದರು.

ಶಿವರಾಜು ಅವರ ತಂದೆಯವರಿಗೆ ಇತ್ತೀಚೆಗೆ ಹೃದಯದ ಸಮಸ್ಯೆ ಕಾಣಿಸಿಕೊಂಡಿತ್ತು. ಅವರನ್ನು ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಿದ್ದಾಗ ಸೋಂಕು ತಗುಲಿದ್ದು, ದೃಢಪಟ್ಟಿತ್ತು. ಹಾಗಾಗಿ ಕುಟುಂಬದ ಸದಸ್ಯರೆಲ್ಲರೂ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದರು. ಈ ವೇಳೆ ಶಿವರಾಜು ಅವರಿಗೆ ಸೋಂಕು ದೃಢಪಟ್ಟಿದೆ. ಕುಟುಂಬದ ಉಳಿದ ಸದಸ್ಯರು ಯಾರೂ ಸೋಂಕು ಹೊಂದಿಲ್ಲ.

‘ಜಗತ್ತನ್ನೇ ಕಾಡುತ್ತಿರುವ ಸೋಂಕು ನನಗೂ ತಗುಲಿದೆ. ಇದಕ್ಕಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ 14 ದಿನ ಮನೆಯಲ್ಲೇ ಆರೈಕೆಗೆ ಒಳಗಾಗುತ್ತೇನೆ’ ಎಂದು ಶಿವರಾಜು ತಿಳಿಸಿದ್ದಾರೆ.

‘ಕೋವಿಡ್ ಕುರಿತು ಜನಜಾಗೃತಿ ಕೆಲಸದಲ್ಲಿ ಎಲ್ಲರೂ ತೊಡಗಿಸಿಕೊಳ್ಳಿ. ಹಿರಿಯ ನಾಗರಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಮನೆಯಿಂದ ಹೊರಗೆ ಹೋಗುವಾಗ ಕಡ್ಡಾಯವಾಗಿ ಮುಖಗವಸು ಧರಿಸಿ. ಜನಸಂದಣಿಗಳಿಂದ ಆದಷ್ಟು ದೂರವಿರಿ’ ಎಂದು ಅವರು ಕಿವಿಮಾತು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT