‘ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಮಾಡದೆ, ಈಗಲೇ ಸೋಂಕು ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್ ನಿರ್ವಹಣೆಯಲ್ಲಿ ಉದಾಸೀನತೆ ತೋರಿದರೆ ಸಂಬಂಧಪಟ್ಟವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ವೈದ್ಯಕೀಯ ಆಮ್ಲಜನಕ ಹಾಸಿಗೆ, ವೆಂಟಿಲೇಟರ್, ಔಷಧ ಸೇರಿ ಯಾವುದಕ್ಕೂ ಕೊರತೆ ಆಗಬಾರದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳನ್ನು ಪೂರ್ಣಪ್ರಮಾಣದಲ್ಲಿ ಜಾರಿ ಮಾಡಬೇಕು. ಪರಿಸ್ಥಿತಿ ನೋಡಿಕೊಂಡು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಅಣಕು ಪ್ರದರ್ಶನ ನಡೆಸಬೇಕು’ ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.