ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಭೇಟಿಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ನಾಗರಾಜ್, ‘ಶರತ್ ಬಚ್ಚೇಗೌಡ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಅವರು ಈಗಾಗಲೇ ಮನೆ– ಮನೆ ಪ್ರಚಾರ ಮಾಡುತ್ತಿದ್ದಾರೆ. ಪ್ರಚಾರ ಮಾಡಿಕೊಳ್ಳಲಿ. ಅದಕ್ಕೂ ನನಗೂ ಸಂಬಂಧವಿಲ್ಲ. ಸುಪ್ರೀಂಕೋರ್ಟ್ ತೀರ್ಪು ಬಂದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.