‘ವೈಕುಂಠ ಏಕಾದಶಿ ದಿನದಂದು ಮಹಾವಿಷ್ಣುವಿನ ವೈಕುಂಠ ಮಹಾದ್ವಾರ ತೆರೆಯಲಾಗುತ್ತದೆ ಎಂದು ನಂಬಿಕೆ ಹಿಂದೂ ಧರ್ಮದಲ್ಲಿ ಇದೆ. ಆ ದಿನ ಬಹಳಷ್ಟು ಜನರಿಗೆ ತಿರಮಲಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಇಲ್ಲಿನ ದೇವಾಲಯಗಳಿಗೆ ಭೇಟಿ ನೀಡುವ ಭಕ್ತರಿಗಾಗಿ ತಿರುಪತಿ ಮಾದರಿಯಲ್ಲೇ ಒಂದು ಲಕ್ಷ ಲಾಡು ತಯಾರಿಸಿ, ವಿತರಿಸಲಾಗುವುದು’ ಎಂದರು.
‘ಲಕ್ಷ ಲಾಡುಗಳನ್ನು ನೂರು ಬಾಣಸಿಗರು ಸಿದ್ಧಪಡಿಸಿದ್ದಾರೆ. ಶುದ್ದ ತುಪ್ಪ, ಗೋಡಂಬಿ, ದ್ರಾಕ್ಷಿ ಬಳಸಲಾಗಿದೆ. ದೇವಾಲಯಕ್ಕೆ ಬರುವ ಭಕ್ತರಿಗೆ ಲಾಡು ವಿತರಿಸಲಾಗುವುದು’ ಎಂದು ಶರವಣ ಹೇಳಿದ್ದಾರೆ.