‘ಕಳೆದ ಐವತ್ತು ವರ್ಷಗಳಲ್ಲಿ ರಾಜ್ಯ ಸರ್ಕಾರ ಎರಡು ಜಿಲ್ಲೆಗಳಲ್ಲಿ ಸೂಪಾ, ಗೇರುಸೊಪ್ಪೆ, ಲಿಂಗನಮಕ್ಕಿ, ವಾರಾಹಿ ಸೇರಿದಂತೆ 18 ಅಣೆಕಟ್ಟೆಗಳನ್ನು ನಿರ್ಮಿಸಿದೆ. ಇದರಿಂದ ಸಾವಿರಾರು ಕೃಷಿ ಕುಟುಂಬಗಳು ಹಾಗೂ ಕೃಷಿ ಕಾರ್ಮಿಕರ ಕುಟುಂಬಗಳು ಬೀದಿಪಾಲಾಗಿವೆ. ಈ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರ ವಿಫಲವಾಗಿದೆ. ವಿದ್ಯುತ್ ಯೋಜನೆಗಳಿಂದ ಮಲೆನಾಡಿನ ಸಾವಿರ ಹೆಕ್ಟೇರ್ ಅರಣ್ಯ ನಾಶವಾಗಿದೆ. ಈ ಅಣೆಕಟ್ಟೆಗಳ ನೀರನ್ನು ವಿದ್ಯುತ್ ಉತ್ಪಾದನೆಗೆ ಮಾತ್ರ ಬಳಸಬೇಕು ಎಂಬುದು ನಮ್ಮ ಬೇಡಿಕೆ’ ಎಂದು ಹಿರಿಯ ವಕೀಲ ದಿವಾಕರ್ ಒತ್ತಾಯಿಸಿದರು.