<p>ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಲಾಭ ಬರುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪದಡಿ ನಾಲ್ವರನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ಕೆ.ಎಸ್. ರೆಹಮತ್ ಉಲ್ಲಾ (29), ಎಂ.ಸಿ. ಮಲ್ಲಯ್ಯಸ್ವಾಮಿ (29) ಹಾಗೂ ಸಿ.ದುರ್ಗಪ್ಪ (28) ಬಂಧಿತರು. ಇವರಿಂದ ಮೂರು ಮೊಬೈಲ್ ಹಾಗೂ 6 ಸಿಮ್ ಕಾರ್ಡ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮೇಕ್ ಇನ್ ಪ್ರಾಫಿಟ್' ಹೆಸರಿನ ಕಂಪನಿ ತೆರೆದಿದ್ದ ಆರೋಪಿಗಳು, ಷೇರು ಮಾರುಕಟ್ಟೆ ಪರಿಣಿತರು ಎಂಬುದಾಗಿ ಹೇಳಿಕೊಳ್ಳುತ್ತಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ, ತಾವು ನೀಡಿದ ಸಲಹೆಗಳನ್ನು ಪಾಲಿಸಿದರೆ ಲಾಭ ಬರುವುದಾಗಿಯೂ ಸಾರ್ವಜನಿಕರಿಗೆ ಹೇಳುತ್ತಿದ್ದರು’ ಎಂದೂ ತಿಳಿಸಿದರು.</p>.<p>‘ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು, ಆರೋಪಿಗಳ ಮಾತು ನಂಬಿ ₹ 2.50 ಲಕ್ಷ ಹೂಡಿಕೆ ಮಾಡಿದ್ದರು. ಆದರೆ, ಯಾವುದೇ ಲಾಭ ಬಂದಿರಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ಆರೋಪಿಗಳು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ' ಎಂದೂ ಹೇಳಿದರು.</p>.<p>ಸಿರಗುಪ್ಪದಲ್ಲಿ ಬಂಧನ: ‘ಜನರನ್ನು ವಂಚಿಸುವ ಉದ್ದೇಶದಿಂದಲೇ ಆರೋಪಿಗಳು, ಮೇಕ್ ಇನ್ ಪ್ರಾಫಿಟ್ ಕಂಪನಿ ಹುಟ್ಟು ಹಾಕಿದ್ದರು. ಜನರನ್ನು ವಂಚಿಸಿ ನಗರದಿಂದ ಪರಾರಿಯಾಗಿದ್ದ ಆರೋಪಿಗಳು, ಸಿರಗುಪ್ಪ ತಾಲ್ಲೂಕಿನಲ್ಲಿರುವ ತಮ್ಮೂರಿನಲ್ಲಿದ್ದರು. ಅಲ್ಲೀಗೆ ಹೋದ ವಿಶೇಷ ತಂಡ, ಆರೋಪಿಗಳನ್ನು ಬಂಧಿಸಿ ನಗರಕ್ಕೆ ಕರೆತಂದಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಲಾಭ ಬರುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪದಡಿ ನಾಲ್ವರನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ಕೆ.ಎಸ್. ರೆಹಮತ್ ಉಲ್ಲಾ (29), ಎಂ.ಸಿ. ಮಲ್ಲಯ್ಯಸ್ವಾಮಿ (29) ಹಾಗೂ ಸಿ.ದುರ್ಗಪ್ಪ (28) ಬಂಧಿತರು. ಇವರಿಂದ ಮೂರು ಮೊಬೈಲ್ ಹಾಗೂ 6 ಸಿಮ್ ಕಾರ್ಡ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮೇಕ್ ಇನ್ ಪ್ರಾಫಿಟ್' ಹೆಸರಿನ ಕಂಪನಿ ತೆರೆದಿದ್ದ ಆರೋಪಿಗಳು, ಷೇರು ಮಾರುಕಟ್ಟೆ ಪರಿಣಿತರು ಎಂಬುದಾಗಿ ಹೇಳಿಕೊಳ್ಳುತ್ತಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ, ತಾವು ನೀಡಿದ ಸಲಹೆಗಳನ್ನು ಪಾಲಿಸಿದರೆ ಲಾಭ ಬರುವುದಾಗಿಯೂ ಸಾರ್ವಜನಿಕರಿಗೆ ಹೇಳುತ್ತಿದ್ದರು’ ಎಂದೂ ತಿಳಿಸಿದರು.</p>.<p>‘ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು, ಆರೋಪಿಗಳ ಮಾತು ನಂಬಿ ₹ 2.50 ಲಕ್ಷ ಹೂಡಿಕೆ ಮಾಡಿದ್ದರು. ಆದರೆ, ಯಾವುದೇ ಲಾಭ ಬಂದಿರಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ಆರೋಪಿಗಳು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ' ಎಂದೂ ಹೇಳಿದರು.</p>.<p>ಸಿರಗುಪ್ಪದಲ್ಲಿ ಬಂಧನ: ‘ಜನರನ್ನು ವಂಚಿಸುವ ಉದ್ದೇಶದಿಂದಲೇ ಆರೋಪಿಗಳು, ಮೇಕ್ ಇನ್ ಪ್ರಾಫಿಟ್ ಕಂಪನಿ ಹುಟ್ಟು ಹಾಕಿದ್ದರು. ಜನರನ್ನು ವಂಚಿಸಿ ನಗರದಿಂದ ಪರಾರಿಯಾಗಿದ್ದ ಆರೋಪಿಗಳು, ಸಿರಗುಪ್ಪ ತಾಲ್ಲೂಕಿನಲ್ಲಿರುವ ತಮ್ಮೂರಿನಲ್ಲಿದ್ದರು. ಅಲ್ಲೀಗೆ ಹೋದ ವಿಶೇಷ ತಂಡ, ಆರೋಪಿಗಳನ್ನು ಬಂಧಿಸಿ ನಗರಕ್ಕೆ ಕರೆತಂದಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>