ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್,‘ಶರ್ಮಾ ಅವರು ತಮ್ಮ ಆತ್ಮರಕ್ಷಣೆಗಾಗಿ ಸ್ವಂತ ರಿವಾಲ್ವಾರ್ ಇಟ್ಟುಕೊಂಡಿದ್ದಾರೆ. ಅದನ್ನು ಸ್ವಚ್ಛಗೊಳಿಸುವ ವೇಳೆಯಲ್ಲೇ ಆಕಸ್ಮಿಕವಾಗಿ ಗುಂಡು ಹಾರಿರುವುದಾಗಿ ಅವರೇ ಹೇಳುತ್ತಿದ್ದಾರೆ. ಅದರ ಆಧಾರದಲ್ಲಿ ತನಿಖೆ ನಡೆಯುತ್ತಿದೆ. ಶಸ್ತ್ರಚಿಕಿತ್ಸೆಯಿಂದಾಗಿ ಅವರು ಹೆಚ್ಚು ಮಾತನಾಡುತ್ತಿಲ್ಲ’ ಎಂದರು.