ಕಾರ್ಯಕ್ರಮ ಸ್ಥಳಕ್ಕೆ ಶಾ ಅವರು ವಾಹನದಲ್ಲಿ ತೆರಳುತ್ತಿದ್ದ ವೇಳೆ ಹಲವು ರಸ್ತೆಗಳಲ್ಲಿ ಸಾರ್ವಜನಿಕರ ಸಂಚಾರ ನಿರ್ಬಂಧಿಸಲಾಗಿತ್ತು. ಪ್ರಮುಖ ರಸ್ತೆ, ಒಳರಸ್ತೆಗಳಲ್ಲಿ ಸಾರ್ವಜನಿಕರ ವಾಹನಗಳನ್ನು ಪೊಲೀಸರು ತಡೆದು ನಿಲ್ಲಿಸಿದ್ದರು. ಸಚಿವರ ವಾಹನ ದಾಟಿ ಹೋಗುವವರೆಗೂ ವಾಹನಗಳು ಸಾಲುಗಟ್ಟಿ ನಿಂತು ವಿಪರೀತ ದಟ್ಟಣೆ ಉಂಟಾಯಿತು. ಬಳ್ಳಾರಿ ರಸ್ತೆ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ನೃಪತುಂಗ ರಸ್ತೆ, ಕ್ವೀನ್ಸ್ ರಸ್ತೆ, ಕೆ.ಆರ್. ವೃತ್ತ, ಹಡ್ಸನ್ ವೃತ್ತ, ಪುರಭವನ ಎದುರು, ಹಳೇ ಏರ್ಪೋರ್ಟ್ ರಸ್ತೆ, ಎಎಸ್ಸಿ ಕೇಂದ್ರ ಹಾಗೂ ಇಸ್ರೊ ಜಂಕ್ಷನ್ ರಸ್ತೆಯಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದಾಗಿ ಸಂಚಾರಿ ಪೊಲೀಸರು ತಿಳಿಸಿದ್ದರು. ಪರ್ಯಾಯ ಮಾರ್ಗ ಬಳಸುವಂತೆ ಕೋರಿದ್ದರು.