ಬೆಂಗಳೂರು: ‘ನಗರದ ಹೊರವಲಯದ ಮಾರತಹಳ್ಳಿ, ಕರಿಯಮ್ಮನ ಅಗ್ರಹಾರ, ಕಾಡುಬೀಸನಹಳ್ಳಿ, ದೇವರಬೀಸನಹಳ್ಳಿ, ಬೆಳ್ಳಂದೂರು, ವರ್ತೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಟ್ಟಡ ಕಾರ್ಮಿಕರ ಜೋಪಡಿಗಳನ್ನು ಏಕಾಏಕಿ ನೆಲಸಮ ಮಾಡಿರುವ ಕುರಿತಂತೆ 24 ಗಂಟೆಗಳಲ್ಲಿ ಮಾಹಿತಿ ನೀಡಿ’ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ರಾಜ್ಯ ಸರ್ಕಾರಕ್ಕೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶಿಸಿದೆ.