ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತ, ‘ರಾಜಕಾರಣಿಗಳು ತಪ್ಪು ಮಾಡಿದರೆ, ಇದು ರಾಜಕೀಯದಲ್ಲಿ ಸರ್ವೇಸಾಮಾನ್ಯ ಎಂದು ಜನ ನಿರ್ಲಕ್ಷ್ಯ ತೋರುತ್ತಾರೆ. ಆದರೆ, ಶಿಕ್ಷಕರು ತಪ್ಪು ಮಾಡಿದಾಗ ಇಡೀ ಸಮಾಜವೇ ಒಂದು ಕ್ಷಣ ಬೆರಗಾಗುತ್ತದೆ. ಏಕೆಂದರೆ, ಶಿಕ್ಷಕರು ಪ್ರತಿಯೊಬ್ಬರ ತಪ್ಪನ್ನು ತಿದ್ದುವ ಸ್ಥಾನದಲ್ಲಿದ್ದಾರೆ’ ಎಂದರು.