‘ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಠಾಣೆಗೆ ಕರೆಸಿ ವಿನಾಕಾರಣ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಲು ನಿರ್ದೇಶನ ನೀಡಬೇಕು’ ಎಂದು ಕೋರಿ ವಾಸೀಂ ಪಾಷ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಅಪರಾಧ ಸಂಚು (ಐಪಿಸಿ 34) ಹಾಗೂ ಹಲ್ಲೆ (ಐಪಿಸಿ 324) ಆರೋಪದಡಿ ಇದೀಗ ಪ್ರಕರಣ ದಾಖಲಾಗಿದೆ.