<p><strong>ಬೆಂಗಳೂರು:</strong> ನಗುನಗುತ್ತಾ ಬಿಂದಾಸ್ ಆಗಿ ಕೋರ್ಟ್ ಒಳಗೆ ಪ್ರವೇಶಿಸಿದ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ್ ಅವರನ್ನು ಇಲ್ಲಿನ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶರು ತರಾಟೆ ತೆಗೆದುಕೊಂಡರು.</p>.<p>ಶಿವನಗೌಡ ನಾಯಕ್ 2008 ರಿಂದ 2013ರ ಅವಧಿಯಲ್ಲಿ ಸಚಿವರಾಗಿದ್ದ ವೇಳೆ ಗ್ರಂಥಾಲಯಕ್ಕೆ ಪುಸ್ತಕ ಖರೀದಿ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.</p>.<p>ಈ ಕುರಿತಂತೆ ಅವರು ಶುಕ್ರವಾರ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.</p>.<p>ನಗರದ ಸಿಟಿ ಸಿವಿಲ್ ಕೋರ್ಟ್ ಹಾಲ್ನ 82ನೇ ಕೋರ್ಟ್ ಒಳಗೆ ಪ್ರವೇಶಿಸಿದ ನಾಯಕ್ ನಗುನಗುತ್ತಲೇ ಬಿಡುಬೀಸಾಗಿ ಹೆಜ್ಜೆಯಿಟ್ಟುಕೊಂಡು ಬಂದರು. ಈ ವರ್ತನೆಗೆ ಗರಂ ಆದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು, ‘ಏನ್ರೀ ನಿಮಗೆ ಕೋರ್ಟ್ನ ಗಾಂಭೀರ್ಯತೆಯ ಅರಿವೇ ಇದ್ದಂತಿಲ್ಲ. ಹೀಗಾ ನೀವು ಕೋರ್ಟ್ ಒಳಗೆ ಬರೋದು’ ಎಂದು ಕಿಡಿ ಕಾರಿದರು.</p>.<p>‘ಕೋರ್ಟ್ ಒಳಗೆ ಹೇಗೆ ನಡೆದುಕೊಳ್ಳಬೇಕು ಎಂಬ ಪರಿಜ್ಞಾನ ಇಲ್ಲದ ನೀವು ಶಾಸಕರಾಗಿ ಹೀಗೆ ನಡೆದುಕೊಂಡರೆ ಹೇಗೆ, ನಿಮ್ಮನ್ನು ಯಾಕೆ ಪೊಲೀಸ್ ಕಸ್ಟಡಿಗೆ ನೀಡಬಾರದು’ ಎಂದು ಪ್ರಶ್ನಿಸಿದರು.</p>.<p>ತಕ್ಷಣವೇ ಮಧ್ಯ ಪ್ರವೇಶಿಸಿದ ನಾಯಕ್ ಪರ ವಕೀಲರು, ಕೋರ್ಟ್ ಕ್ಷಮೆ ಕೇಳುವಂತೆ ನಾಯಕ್ ಅವರಿಗೆ ಸೂಚಿಸಿದರು. ವಕೀಲರ ಸಲಹೆಯಂತೆ ನಾಯಕ್ ಕೋರ್ಟ್ ಕ್ಷಮೆ ಯಾಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗುನಗುತ್ತಾ ಬಿಂದಾಸ್ ಆಗಿ ಕೋರ್ಟ್ ಒಳಗೆ ಪ್ರವೇಶಿಸಿದ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ್ ಅವರನ್ನು ಇಲ್ಲಿನ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶರು ತರಾಟೆ ತೆಗೆದುಕೊಂಡರು.</p>.<p>ಶಿವನಗೌಡ ನಾಯಕ್ 2008 ರಿಂದ 2013ರ ಅವಧಿಯಲ್ಲಿ ಸಚಿವರಾಗಿದ್ದ ವೇಳೆ ಗ್ರಂಥಾಲಯಕ್ಕೆ ಪುಸ್ತಕ ಖರೀದಿ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.</p>.<p>ಈ ಕುರಿತಂತೆ ಅವರು ಶುಕ್ರವಾರ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.</p>.<p>ನಗರದ ಸಿಟಿ ಸಿವಿಲ್ ಕೋರ್ಟ್ ಹಾಲ್ನ 82ನೇ ಕೋರ್ಟ್ ಒಳಗೆ ಪ್ರವೇಶಿಸಿದ ನಾಯಕ್ ನಗುನಗುತ್ತಲೇ ಬಿಡುಬೀಸಾಗಿ ಹೆಜ್ಜೆಯಿಟ್ಟುಕೊಂಡು ಬಂದರು. ಈ ವರ್ತನೆಗೆ ಗರಂ ಆದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು, ‘ಏನ್ರೀ ನಿಮಗೆ ಕೋರ್ಟ್ನ ಗಾಂಭೀರ್ಯತೆಯ ಅರಿವೇ ಇದ್ದಂತಿಲ್ಲ. ಹೀಗಾ ನೀವು ಕೋರ್ಟ್ ಒಳಗೆ ಬರೋದು’ ಎಂದು ಕಿಡಿ ಕಾರಿದರು.</p>.<p>‘ಕೋರ್ಟ್ ಒಳಗೆ ಹೇಗೆ ನಡೆದುಕೊಳ್ಳಬೇಕು ಎಂಬ ಪರಿಜ್ಞಾನ ಇಲ್ಲದ ನೀವು ಶಾಸಕರಾಗಿ ಹೀಗೆ ನಡೆದುಕೊಂಡರೆ ಹೇಗೆ, ನಿಮ್ಮನ್ನು ಯಾಕೆ ಪೊಲೀಸ್ ಕಸ್ಟಡಿಗೆ ನೀಡಬಾರದು’ ಎಂದು ಪ್ರಶ್ನಿಸಿದರು.</p>.<p>ತಕ್ಷಣವೇ ಮಧ್ಯ ಪ್ರವೇಶಿಸಿದ ನಾಯಕ್ ಪರ ವಕೀಲರು, ಕೋರ್ಟ್ ಕ್ಷಮೆ ಕೇಳುವಂತೆ ನಾಯಕ್ ಅವರಿಗೆ ಸೂಚಿಸಿದರು. ವಕೀಲರ ಸಲಹೆಯಂತೆ ನಾಯಕ್ ಕೋರ್ಟ್ ಕ್ಷಮೆ ಯಾಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>