ವಾಹನ ಸಂಚಾರಕ್ಕೆ ಮೇಲ್ಸೇತುವೆ ಯೋಗ್ಯವಾಗಿದೆಯೆ ಎಂಬುದರ ಬಗ್ಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನಿಂದ(ಐಐಎಸ್ಸಿ) ಬಿಬಿಎಂಪಿ ಅಭಿಪ್ರಾಯ ಕೇಳಿತ್ತು. ‘ವರದಿ ಇನ್ನೂ ಬಂದಿಲ್ಲ. ಆದರೆ, ಸೇತುವೆ ರಚನೆಯಲ್ಲಿ ಯಾವುದೇ ದೋಷ ಇಲ್ಲ ಎಂಬ ಅಭಿಪ್ರಾಯ ಇದೆ. ಆದ್ದರಿಂದ ಶೀಘ್ರವೇ ಮತ್ತೊಮ್ಮೆ ಡಾಂಬರ್ ಹಾಕಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.