<p><strong>ಬೆಂಗಳೂರು:</strong> ‘ಐಎಎಸ್ ಮತ್ತು ಕೆಎಎಸ್ ಪರೀಕ್ಷೆ ಎದುರಿಸಲು ಕಾರ್ಮಿಕ ಮಂಡಳಿ ಮೂಲಕ ನೀಡುತ್ತಿರುವ ತರಬೇತಿ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು.</p>.<p>2021–22ನೇ ಸಾಲಿನ ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಪರೀಕ್ಷೆಗೆ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ತರಬೇತಿ ಆಯ್ಕೆಯಾಗಿರುವ ಕಾರ್ಮಿಕರ ಮಕ್ಕಳಿಗೆ ಪ್ರವೇಶ ಪತ್ರ ವಿತರಿಸಿ ಅವರು ಮಾತನಾಡಿದರು.</p>.<p>‘ಕಾರ್ಮಿಕರ ಮಕ್ಕಳ ಭವಿಷ್ಯ ಕಟ್ಟಿಕೊಡುವ ಉದ್ದೇಶದಿಂದ ಈ ತರಬೇತಿ ಆಯೋಜಿಸಲಾಗಿದೆ. ಬಡವರಿಗೂ ಅರ್ಹತೆ ಮತ್ತು ಯೋಗ್ಯತೆ ಇದೆ. ಹಣಕಾಸಿನ ತೊಂದರೆಯಿಂದ ಅವರು ತರಬೇತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಅವಕಾಶ ಕಲ್ಪಿಸಿಕೊಡುವ ಕೆಲಸವನ್ನು ಇಲಾಖೆ ಮಾಡಿದೆ’ ಎಂದರು.</p>.<p>‘ಈ ತರಬೇತಿಗೆ ಮಕ್ಕಳನ್ನು ಸಂಸ್ಥೆ ಮೂಲಕ ಆಯ್ಕೆ ಮಾಡಿದ್ದೇವೆ. ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಮಕ್ಕಳು ತರಬೇತಿ ಪಡೆದು ಅಧಿಕಾರಿಗಳಾಗಿ ಅವರ ಮನೆಗಳಿಗೆ ಬೆಳಕಾಗಬೇಕು’ ಎಂದು ಹಾರೈಸಿದರು. ಕಾರ್ಮಿಕ ಆಯುಕ್ತ ಅಕ್ರಂ ಪಾಷ ಅವರು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿಧಾನ ವಿವರಿಸಿದರು.</p>.<p>ಕಾರ್ಮಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕಲ್ಪನಾ, ಮಂಡಳಿಯ ಕಾರ್ಯದರ್ಶಿ ಎಂ.ಪಿ.ಗುರುಪ್ರಸಾದ್, ಜಂಟಿ ಕಾರ್ಯದರ್ಶಿ ಶಿವಪುತ್ರ ಬಾಬುರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಐಎಎಸ್ ಮತ್ತು ಕೆಎಎಸ್ ಪರೀಕ್ಷೆ ಎದುರಿಸಲು ಕಾರ್ಮಿಕ ಮಂಡಳಿ ಮೂಲಕ ನೀಡುತ್ತಿರುವ ತರಬೇತಿ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು.</p>.<p>2021–22ನೇ ಸಾಲಿನ ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಪರೀಕ್ಷೆಗೆ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ತರಬೇತಿ ಆಯ್ಕೆಯಾಗಿರುವ ಕಾರ್ಮಿಕರ ಮಕ್ಕಳಿಗೆ ಪ್ರವೇಶ ಪತ್ರ ವಿತರಿಸಿ ಅವರು ಮಾತನಾಡಿದರು.</p>.<p>‘ಕಾರ್ಮಿಕರ ಮಕ್ಕಳ ಭವಿಷ್ಯ ಕಟ್ಟಿಕೊಡುವ ಉದ್ದೇಶದಿಂದ ಈ ತರಬೇತಿ ಆಯೋಜಿಸಲಾಗಿದೆ. ಬಡವರಿಗೂ ಅರ್ಹತೆ ಮತ್ತು ಯೋಗ್ಯತೆ ಇದೆ. ಹಣಕಾಸಿನ ತೊಂದರೆಯಿಂದ ಅವರು ತರಬೇತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಅವಕಾಶ ಕಲ್ಪಿಸಿಕೊಡುವ ಕೆಲಸವನ್ನು ಇಲಾಖೆ ಮಾಡಿದೆ’ ಎಂದರು.</p>.<p>‘ಈ ತರಬೇತಿಗೆ ಮಕ್ಕಳನ್ನು ಸಂಸ್ಥೆ ಮೂಲಕ ಆಯ್ಕೆ ಮಾಡಿದ್ದೇವೆ. ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಮಕ್ಕಳು ತರಬೇತಿ ಪಡೆದು ಅಧಿಕಾರಿಗಳಾಗಿ ಅವರ ಮನೆಗಳಿಗೆ ಬೆಳಕಾಗಬೇಕು’ ಎಂದು ಹಾರೈಸಿದರು. ಕಾರ್ಮಿಕ ಆಯುಕ್ತ ಅಕ್ರಂ ಪಾಷ ಅವರು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿಧಾನ ವಿವರಿಸಿದರು.</p>.<p>ಕಾರ್ಮಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕಲ್ಪನಾ, ಮಂಡಳಿಯ ಕಾರ್ಯದರ್ಶಿ ಎಂ.ಪಿ.ಗುರುಪ್ರಸಾದ್, ಜಂಟಿ ಕಾರ್ಯದರ್ಶಿ ಶಿವಪುತ್ರ ಬಾಬುರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>