<p><strong>ಬೆಂಗಳೂರು:</strong> ನಗರದ ಉತ್ತರ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಪ್ರತಿಷ್ಠಿತ ಡಾ.ಶಿವರಾಮ ಕಾರಂತ (ಎಸ್.ಕೆ) ಬಡಾವಣೆಯಲ್ಲಿ ಮೂವತ್ತು ಸಾವಿರ ನಿವೇಶನ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಬಾಕಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಮೂರು ತಿಂಗಳು ಗಡುವು ನೀಡಲಾಗಿದೆ.</p><p>ನಾಡಪ್ರಭು ಕೆಂಪೇಗೌಡ ಬಡಾವಣೆ ಬಳಿಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಯಾವುದೇ ಬಡಾವಣೆಗಳ ನಿರ್ಮಾಣ ವಾಗಲಿ, ನಿವೇಶನಗಳ ಹಂಚಿಕೆಯಾಗಲಿ ಮಾಡಿರಲಿಲ್ಲ. ಹಾಗಾಗಿ ಶಿವರಾಮ ಕಾರಂತ (ಎಸ್.ಕೆ.) ಬಡಾವಣೆಯಲ್ಲಿ ನಿವೇಶನ ಖರೀದಿಸಲು ಜನರು ಕಾಯುತ್ತಿದ್ದಾರೆ.</p><p>ಬಡಾವಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ನಿರ್ಮಿಸಲಾಗಿದ್ದು, 16-17 ಸಾವಿರ ನಿವೇಶನಗಳನ್ನು ರೈತರಿಗೆ ನೀಡಲಾಗುತ್ತದೆ. 30X40 ಅಡಿ ಮತ್ತು 40X60 ಅಡಿ ಅಳತೆಯ ನಿವೇಶನಗಳು ಹೆಚ್ಚಿನ ಸಂಖ್ಯೆಯಲ್ಲಿದೆ. ನಾಲ್ಕು ಸಾವಿರಕ್ಕೂ ಅಧಿಕ ಮೂಲೆ ನಿವೇಶನಗಳಿವೆ. ಸುಮಾರು 7-8 ಸಾವಿರ ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆಗೆ ಸಿಗಲಿವೆ. ಒಂದು ಚದರ ಅಡಿಗೆ ₹4,900 ದರ ನಿಗದಿಪಡಿಸಲಾಗಿದೆ.</p><p>‘ಏಪ್ರಿಲ್ ಅಂತ್ಯದ ವೇಳೆಗೆ ಕಾಮಗಾರಿಗಳು ಪೂರ್ಣಗೊಳ್ಳಬೇಕಿತ್ತು. ಕಾಮಗಾರಿ ಶೇಕಡ 80ರಷ್ಟು ಪೂರ್ಣಗೊಂಡಿದೆ. ರಸ್ತೆ ನಿರ್ಮಾಣ, ಪೈಪ್ಲೈನ್ ಅಳವಡಿಕೆ ಸೇರಿದಂತೆ ನಾನಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಗಡುವು ನೀಡಲಾಗಿದೆ.</p><p>ಇತ್ತೀಚೆಗೆ, ಸುಪ್ರೀಂ ಕೋರ್ಟ್ ಬಿಡಿಎಗೆ ಸುಮಾರು 200 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಅನುಮತಿ ನೀಡಿದೆ’ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದರು.</p><p>‘ಬಡಾವಣೆಯಲ್ಲಿನ ಒಂಬತ್ತು ಸೆಕ್ಟರ್ಗಳ ಪೈಕಿ ಕೆಲವು ಸೆಕ್ಟರ್ಗಳಲ್ಲಿ ಶೇಕಡ 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮತ್ತೆ ಕೆಲ ಸೆಕ್ಟರ್ಗಳಲ್ಲಿ ಶೇಕಡ 80ರಷ್ಟು ಕೆಲಸವಾಗಿದೆ. ಬೀದಿ ದೀಪಗಳನ್ನು ಅಳವಡಿಸಲಾಗಿದೆ.</p><p>ಬ್ಲಾಕ್ಗಳಲ್ಲಿ ನಿವೇಶನಗಳನ್ನು ಗುರುತಿಸಿ, ಅಡ್ಡ ರಸ್ತೆಗಳನ್ನು ನಿರ್ಮಿಸಲಾಗಿದೆ. ನೀರಿನ ಸಂಪರ್ಕ ಹಾಗೂ ಒಳಚರಂಡಿ ಪೈಪ್ಲೈನ್ಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ’ ಎಂದು ಅಧಿಕಾರಿಗಳು ಹೇಳಿದರು.<br>ಭೂಸ್ವಾಧೀನ ಸೇರಿದಂತೆ ಇತರೆ ಸಮಸ್ಯೆಗಳನ್ನು ಬಗೆಹರಿಸದೇ ನಿವೇಶನ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪ ಬಂತು. ಹಾಗಾಗಿ ನಿವೇಶನ ಹಂಚಿಕೆಗೆ ಸಾರ್ವಜನಿಕರಿಂದ ಅರ್ಜಿ ಗಳನ್ನು ಆಹ್ವಾನಿಸಿ, ಅಧಿಸೂಚನೆ ಹೊರಡಿಸ ದಂತೆ ನಿರ್ಬಂಧ ವಿಧಿಸಲಾಗಿತ್ತು.</p><p>ಈ ಪ್ರಕರಣವು ನ್ಯಾಯಾಲಯದಲ್ಲಿ ಇನ್ನೂ ಇತ್ಯರ್ಥವಾಗಿಲ್ಲ. ನ್ಯಾಯಾಲಯ ಆದೇಶ ನೀಡಿದ ಕೂಡಲೇ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗುವುದು . ಇದಕ್ಕೆ ಎಲ್ಲ ಸಿದ್ಧತೆ ನಡೆದಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ.</p>.<p><strong>2,782 ಎಕರೆಯಲ್ಲಿ ಬಡಾವಣೆ</strong></p><p>2008ರಲ್ಲಿ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ 3,546 ಎಕರೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಯಿತು. ಸ್ವಾಧೀನಪಡಿಸಿಕೊಂಡ ಜಮೀನಿನ ಪೈಕಿ 2,782 ಎಕರೆಯಲ್ಲಿ ನಿವೇಶನಗಳನ್ನು ನಿರ್ಮಿಸಲಾಗಿದೆ.</p><p>ಬಡಾವಣೆ ನಿರ್ಮಾಣಕ್ಕೆ ಗಾಣಿಗರಹಳ್ಳಿ, ಕಾಳತಮ್ಮನಹಳ್ಳಿ, ಲಕ್ಷ್ಮೀಪುರ, ಸೋಮಶೆಟ್ಟಿಹಳ್ಳಿ, ಕೆಂಪಾಪುರ, ರಾಮಗೊಂಡನಹಳ್ಳಿ, ಹಾರೋಹಳ್ಳಿ, ಆವಲಹಳ್ಳಿ, ಗುಣಿ ಅಗ್ರಹಾರ, ಮೇಡಿ ಅಗ್ರಹಾರ, ಶಾಮರಾಜಪುರ, ವೀರಸಾಗರ ಕೆ.ಬಿ. ಕಾವಲ್, ದೊಡ್ಡಬೆಟ್ಟಹಳ್ಳಿ, ವಡೇರಹಳ್ಳಿ, ಕೆಂಪನಹಳ್ಳಿ, ಬ್ಯಾಲಕೆರೆ ಗ್ರಾಮಗಳ ರೈತರಿಂದ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ.</p>.<div><blockquote>ಶಿವರಾಮ ಕಾರಂತ ಬಡಾವಣೆಯಲ್ಲಿ ಬಹುತೇಕ ಕಾಮಗಾರಿ ಪೂರ್ಣಗೊಂಡಿವೆ. ಬಾಕಿ ಇರುವ ಕೆಲಸಗಳು ಶೀಘ್ರ ಮುಗಿಯಲಿದೆ. </blockquote><span class="attribution">-ಮೋಹನ್ ಕುಮಾರ್, ಕಾರ್ಯಪಾಲಕ ಎಂಜಿನಿಯರ್, ಬಿಡಿಎ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಉತ್ತರ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಪ್ರತಿಷ್ಠಿತ ಡಾ.ಶಿವರಾಮ ಕಾರಂತ (ಎಸ್.ಕೆ) ಬಡಾವಣೆಯಲ್ಲಿ ಮೂವತ್ತು ಸಾವಿರ ನಿವೇಶನ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಬಾಕಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಮೂರು ತಿಂಗಳು ಗಡುವು ನೀಡಲಾಗಿದೆ.</p><p>ನಾಡಪ್ರಭು ಕೆಂಪೇಗೌಡ ಬಡಾವಣೆ ಬಳಿಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಯಾವುದೇ ಬಡಾವಣೆಗಳ ನಿರ್ಮಾಣ ವಾಗಲಿ, ನಿವೇಶನಗಳ ಹಂಚಿಕೆಯಾಗಲಿ ಮಾಡಿರಲಿಲ್ಲ. ಹಾಗಾಗಿ ಶಿವರಾಮ ಕಾರಂತ (ಎಸ್.ಕೆ.) ಬಡಾವಣೆಯಲ್ಲಿ ನಿವೇಶನ ಖರೀದಿಸಲು ಜನರು ಕಾಯುತ್ತಿದ್ದಾರೆ.</p><p>ಬಡಾವಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ನಿರ್ಮಿಸಲಾಗಿದ್ದು, 16-17 ಸಾವಿರ ನಿವೇಶನಗಳನ್ನು ರೈತರಿಗೆ ನೀಡಲಾಗುತ್ತದೆ. 30X40 ಅಡಿ ಮತ್ತು 40X60 ಅಡಿ ಅಳತೆಯ ನಿವೇಶನಗಳು ಹೆಚ್ಚಿನ ಸಂಖ್ಯೆಯಲ್ಲಿದೆ. ನಾಲ್ಕು ಸಾವಿರಕ್ಕೂ ಅಧಿಕ ಮೂಲೆ ನಿವೇಶನಗಳಿವೆ. ಸುಮಾರು 7-8 ಸಾವಿರ ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆಗೆ ಸಿಗಲಿವೆ. ಒಂದು ಚದರ ಅಡಿಗೆ ₹4,900 ದರ ನಿಗದಿಪಡಿಸಲಾಗಿದೆ.</p><p>‘ಏಪ್ರಿಲ್ ಅಂತ್ಯದ ವೇಳೆಗೆ ಕಾಮಗಾರಿಗಳು ಪೂರ್ಣಗೊಳ್ಳಬೇಕಿತ್ತು. ಕಾಮಗಾರಿ ಶೇಕಡ 80ರಷ್ಟು ಪೂರ್ಣಗೊಂಡಿದೆ. ರಸ್ತೆ ನಿರ್ಮಾಣ, ಪೈಪ್ಲೈನ್ ಅಳವಡಿಕೆ ಸೇರಿದಂತೆ ನಾನಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಗಡುವು ನೀಡಲಾಗಿದೆ.</p><p>ಇತ್ತೀಚೆಗೆ, ಸುಪ್ರೀಂ ಕೋರ್ಟ್ ಬಿಡಿಎಗೆ ಸುಮಾರು 200 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಅನುಮತಿ ನೀಡಿದೆ’ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದರು.</p><p>‘ಬಡಾವಣೆಯಲ್ಲಿನ ಒಂಬತ್ತು ಸೆಕ್ಟರ್ಗಳ ಪೈಕಿ ಕೆಲವು ಸೆಕ್ಟರ್ಗಳಲ್ಲಿ ಶೇಕಡ 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮತ್ತೆ ಕೆಲ ಸೆಕ್ಟರ್ಗಳಲ್ಲಿ ಶೇಕಡ 80ರಷ್ಟು ಕೆಲಸವಾಗಿದೆ. ಬೀದಿ ದೀಪಗಳನ್ನು ಅಳವಡಿಸಲಾಗಿದೆ.</p><p>ಬ್ಲಾಕ್ಗಳಲ್ಲಿ ನಿವೇಶನಗಳನ್ನು ಗುರುತಿಸಿ, ಅಡ್ಡ ರಸ್ತೆಗಳನ್ನು ನಿರ್ಮಿಸಲಾಗಿದೆ. ನೀರಿನ ಸಂಪರ್ಕ ಹಾಗೂ ಒಳಚರಂಡಿ ಪೈಪ್ಲೈನ್ಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ’ ಎಂದು ಅಧಿಕಾರಿಗಳು ಹೇಳಿದರು.<br>ಭೂಸ್ವಾಧೀನ ಸೇರಿದಂತೆ ಇತರೆ ಸಮಸ್ಯೆಗಳನ್ನು ಬಗೆಹರಿಸದೇ ನಿವೇಶನ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪ ಬಂತು. ಹಾಗಾಗಿ ನಿವೇಶನ ಹಂಚಿಕೆಗೆ ಸಾರ್ವಜನಿಕರಿಂದ ಅರ್ಜಿ ಗಳನ್ನು ಆಹ್ವಾನಿಸಿ, ಅಧಿಸೂಚನೆ ಹೊರಡಿಸ ದಂತೆ ನಿರ್ಬಂಧ ವಿಧಿಸಲಾಗಿತ್ತು.</p><p>ಈ ಪ್ರಕರಣವು ನ್ಯಾಯಾಲಯದಲ್ಲಿ ಇನ್ನೂ ಇತ್ಯರ್ಥವಾಗಿಲ್ಲ. ನ್ಯಾಯಾಲಯ ಆದೇಶ ನೀಡಿದ ಕೂಡಲೇ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗುವುದು . ಇದಕ್ಕೆ ಎಲ್ಲ ಸಿದ್ಧತೆ ನಡೆದಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ.</p>.<p><strong>2,782 ಎಕರೆಯಲ್ಲಿ ಬಡಾವಣೆ</strong></p><p>2008ರಲ್ಲಿ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ 3,546 ಎಕರೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಯಿತು. ಸ್ವಾಧೀನಪಡಿಸಿಕೊಂಡ ಜಮೀನಿನ ಪೈಕಿ 2,782 ಎಕರೆಯಲ್ಲಿ ನಿವೇಶನಗಳನ್ನು ನಿರ್ಮಿಸಲಾಗಿದೆ.</p><p>ಬಡಾವಣೆ ನಿರ್ಮಾಣಕ್ಕೆ ಗಾಣಿಗರಹಳ್ಳಿ, ಕಾಳತಮ್ಮನಹಳ್ಳಿ, ಲಕ್ಷ್ಮೀಪುರ, ಸೋಮಶೆಟ್ಟಿಹಳ್ಳಿ, ಕೆಂಪಾಪುರ, ರಾಮಗೊಂಡನಹಳ್ಳಿ, ಹಾರೋಹಳ್ಳಿ, ಆವಲಹಳ್ಳಿ, ಗುಣಿ ಅಗ್ರಹಾರ, ಮೇಡಿ ಅಗ್ರಹಾರ, ಶಾಮರಾಜಪುರ, ವೀರಸಾಗರ ಕೆ.ಬಿ. ಕಾವಲ್, ದೊಡ್ಡಬೆಟ್ಟಹಳ್ಳಿ, ವಡೇರಹಳ್ಳಿ, ಕೆಂಪನಹಳ್ಳಿ, ಬ್ಯಾಲಕೆರೆ ಗ್ರಾಮಗಳ ರೈತರಿಂದ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ.</p>.<div><blockquote>ಶಿವರಾಮ ಕಾರಂತ ಬಡಾವಣೆಯಲ್ಲಿ ಬಹುತೇಕ ಕಾಮಗಾರಿ ಪೂರ್ಣಗೊಂಡಿವೆ. ಬಾಕಿ ಇರುವ ಕೆಲಸಗಳು ಶೀಘ್ರ ಮುಗಿಯಲಿದೆ. </blockquote><span class="attribution">-ಮೋಹನ್ ಕುಮಾರ್, ಕಾರ್ಯಪಾಲಕ ಎಂಜಿನಿಯರ್, ಬಿಡಿಎ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>