ಶಿವರಾಮ ಕಾರಂತ ಬಡಾವಣೆಗೆ ಗೊತ್ತುಪಡಿಸಿರುವ ಪ್ರದೇಶಗಳಲ್ಲಿ 2018ರ ಆ.3ಕ್ಕೆ ಮುಂಚಿತವಾಗಿ ನಿರ್ಮಿಸಲಾದ ಕಟ್ಟಡ ಮತ್ತು ಮನೆಗಳ ಬಗ್ಗೆ ವರದಿಯನ್ನು ನೀಡಲು ಸುಪ್ರೀಂ ಕೋರ್ಟ್ ನ್ಯಾ. ಎ.ವಿ. ಚಂದ್ರಶೇಖರ್ ಸಮಿತಿಯನ್ನು ನೇಮಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಮಿತಿಯು ಮಾರ್ಚ್ 1ರಂದು ಚಾಲನೆ ನೀಡಿತ್ತು. ಈ ಬಡಾವಣೆಯ ಅಧಿಸೂಚಿತ ಪ್ರದೇಶಗಳಲ್ಲಿ ಐದು ಸಹಾಯ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಕೇಂದ್ರಗಳಲ್ಲಿ ಸಮಿತಿಯು ದಾಖಲೆಗಳನ್ನು ಸಂಗ್ರಹಿಸುತ್ತಿದೆ.