ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿಶ್ವನಾಥ್, ‘ಪ್ರತಿಭಟನೆಯ ನಡುವೆಯೇ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ನಿಯೋಗ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು ಹೌದು. ಮುಖ್ಯಮಂತ್ರಿ ಅವರು ಭೂಸ್ವಾಧೀನ ಕೈಬಿಡುವ ಬಗ್ಗೆಯಾಗಲೀ ಅಥವಾ ಯೋಜನೆಯನ್ನು ಕೈಬಿಡುವ ಬಗ್ಗೆಯಾಗಲೀನಿಯೋಗಕ್ಕೆ ಯಾವುದೇ ಭರವಸೆಯನ್ನೂ ನೀಡಿಲ್ಲ. ಆದರೆ, ಕೋಡಿಹಳ್ಳಿ ಚಂದ್ರಶೇಖರ್ ಅವರು ಮಾಧ್ಯಮಗಳ ಮೂಲಕ ಈ ವಿಚಾರದಲ್ಲಿ ತಪ್ಪು ಸಂದೇಶವನ್ನು ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.