‘ಬಡಾವಣೆಯ ಭೂಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿರುವ ಪ್ರದೇಶದ ಆಸ್ತಿ ಮಾಲೀಕರಲ್ಲಿ ತಪ್ಪು ಮಾಹಿತಿ, ತಪ್ಪು ತಿಳಿವಳಿಕೆ ಮತ್ತು ಗೊಂದಲಗಳಿರುವುದು ಗಮನಕ್ಕೆ ಬಂದಿದೆ. ಈ ಗೊಂದಲಗಳನ್ನು ನಿವಾರಿಸಲು ಹಾಗೂ ತಪ್ಪು ತಿಳಿವಳಿಕೆಯನ್ನು ತೊಡೆದುಹಾಕಲು ಮತ್ತು ಸುಪ್ರೀಂ ಕೋರ್ಟ್ನ ಆದೇಶಗಳ ವಾಸ್ತವ ಉದ್ದೇಶ ಹಾಗೂ ಪರಿಣಾಮಗಳನ್ನು ನೇರವಾಗಿ ಮಾಲೀಕರಿಗೆ ವಿವರಿಸಲು ಈ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ’ ಎಂದು ಸಮಿತಿ ತಿಳಿಸಿದೆ.