‘ವಿಪರೀತ ವಿಳಂಬ ನೀತಿ ಅನುಸರಿಸುತ್ತಿರುವ ಬಿಡಿಎಗೆ, ಶಿವರಾಮ ಕಾರಂತ ಬಡಾವಣೆಯನ್ನು ಅಭಿವೃದ್ಧಿಪಡಿಸುವ ಇರಾದೆ ಇದ್ದಂತಿಲ್ಲ. ಭೂ ಸ್ವಾಧೀನಪಡಿಸಿಕೊಂಡಿರುವ ಜಮೀನುದಾರರಿಗೆ ಹಣ ಪಾವತಿಸಲು ಬಿಡಿಎ ಬಳಿ ಹಣ ಇಲ್ಲದಂತಾಗಿದೆ. ಈಗಾಗಲೇ ಹೈಕೋರ್ಟ್ ಏಕಸದಸ್ಯ ಪೀಠ ಈ ಮೊದಲು ಅರ್ಜಿದಾರರ ಪರ ನೀಡಿದ್ದ ಆದೇಶದ ಅನುಸಾರ ನಿರಾಕ್ಷೇಪಣ ಪತ್ರ ಪಡೆದಿರುವವರು ನಿವೇಶನಗಳನ್ನು ಮಾರಾಟ ಮಾಡಿದ್ದು ಅಂತಹ ಕಡೆ ಬಡಾವಣೆ ಅಭಿವೃದ್ಧಿ ಆಗುತ್ತಿದೆ. ಆದ್ದರಿಂದ, ಅಧಿಸೂಚನೆ ರದ್ದುಗೊಳಿಸಲು ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.