ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾತ್ರಿ: ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಕಾರ್ಯಕ್ರಮಕ್ಕೆ ಸರ್ಕಾರ ಸೂಚನೆ

Published 7 ಮಾರ್ಚ್ 2024, 15:56 IST
Last Updated 7 ಮಾರ್ಚ್ 2024, 15:56 IST
ಅಕ್ಷರ ಗಾತ್ರ

ಬೆಂಗಳೂರು: ಶಿವರಾತ್ರಿ ದಿನ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ಮಾಡಬೇಕು. ಜೊತೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಶಾಂತಿ, ಸಂಯಮದೊಂದಿಗೆ ಜನರಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಸ್ನೇಹ ಉಂಟಾಗಲೆಂದು ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಬೇಕು. ರುದ್ರಾಭಿಷೇಕ, ರುದ್ರಹೋಮ ಪೂಜಾಕಾರ್ಯಗಳನ್ನು ವಿಶೇಷವಾಗಿ ನೆರವೇರಿಸಬೇಕು.

ಯಕ್ಷಗಾನ, ವೀರಭದ್ರ ಕುಣಿತ, ಡೊಳ್ಳು ಕುಣಿತ, ದೇಸಿ ವಾದ್ಯಗಳು, ಭರತನಾಟ್ಯ, ಭಕ್ತಿಗೀತೆ, ಸಾಂಪ್ರದಾಯಿಕ ಜನಪದ ಕಲೆಗಳು, ದಕ್ಷಯಜ್ಞ, ಶನಿಮಹಾತ್ಮೆ ಮುಂತಾದ ಶಿವ ಸಂಬಂಧಿ ಪಾರಂಪರಿಕ ಸ್ಥಳೀಯ ಕಿರುನಾಟಕಗಳನ್ನು, ಶಿವಪುರಾಣ, ಕಥಾ ಶ್ರವಣಗಳನ್ನು ಆಯೋಜಿಸಬೇಕು. 

ಮರೆಯಾಗುತ್ತಿರುವ ಸಾಂಸ್ಕೃತಿಕ ಕಲೆಗಳಾದ ಗೊಂಬೆಯಾಟ, ಕೋಲಾಟಗಳನ್ನು ಕಲಾವಿದರ ಲಭ್ಯತೆ ನೋಡಿಕೊಂಡು ಹಮ್ಮಿಕೊಳ್ಳಬಹುದು ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT