ಕೃಷಿ ಇಲಾಖೆ ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಲ್ಲಿ ಮಾತನಾಡಿದ ಅವರು, ‘ಆಹಾರ ಪದಾರ್ಥಗಳ ರಫ್ತಿನಲ್ಲಿ ಭಾರತವು ವಿಶ್ವದಲ್ಲಿಯೇ 9ನೇ ಸ್ಥಾನದಲ್ಲಿದೆ. ಸ್ಥಳೀಯವಾಗಿ ಬೆಳೆಯುವ ಜೋಳ, ರಾಗಿ, ಊದಲು, ನವಣೆ, ಹಾರಕ, ಕೊರಲೆ, ಸಾಮೆಗೆ ಅಂತರರಾಷ್ಟ್ರೀಯ ಮಾರುಕಟ್ಟೆ ಕಲ್ಪಿಸಲು ತೀರ್ಮಾನಿಸಿದೆ. ಗುಣಮಟ್ಟದ ಸಿರಿಧಾನ್ಯ ಬೆಳೆದರೆ ಅಂತರರಾಷ್ಟ್ರೀಯ ಮಾರುಕಟ್ಟೆ ಕಲ್ಪಿಸಲು ಸಾಧ್ಯವಾಗಲಿದೆ. ಕೀಟನಾಶಕ ಹಾಗೂ ರಸಗೊಬ್ಬರ ಬಳಸದಿರುವ ಸಿರಿಧಾನ್ಯಕ್ಕೆ ಬೇಡಿಕೆ ಹೆಚ್ಚಿದೆ’ ಎಂದು ಹೇಳಿದರು.