<p><strong>ಬೆಂಗಳೂರು:</strong> ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಆನಂದರಾವ್ ವೃತ್ತದಲ್ಲಿ ಜಮಾವಣೆಗೊಂಡ ಕರ್ನಾಟಕ ರಕ್ಷಣಾ ವೇದಿಕೆ ನಗರ ಜಿಲ್ಲಾ ಘಟಕದ ಮಹಿಳಾ ಕಾರ್ಯಕರ್ತರು ಶೋಭಾ ಕರಂದ್ಲಾಜೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶೋಭಾ ಅವರ ಪ್ರತಿಕೃತಿ ದಹಿಸಿಲು ಯತ್ನಿಸಿದರು. ಪ್ರತಿಭಟನಕಾರರನ್ನು ಸ್ಥಳದಲ್ಲಿದ್ದ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ ಬಿಡುಗಡೆ ಮಾಡಿದರು. </p>.<p>‘ಹಿಂದಿ ಹೇರಿಕೆ ಪರವಾಗಿ ಬಿಜೆಪಿಯ ಬಿ.ವೈ.ವಿಜಯೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್.ಅಶೋಕ,ಬಿ. ಶ್ರೀರಾಮುಲು, ಸುರೇಶ್ ಕುಮಾರ್ ಅವರು ಕೂಡ ಮಾತನಾಡುತ್ತಿದ್ದಾರೆ’ ಎಂದು ಆರೋಪಿಸಿದ ಕಾರ್ಯಕರ್ತರು, ಅವರ ವಿರುದ್ಧವೂ ಘೋಷಣೆಗಳನ್ನು ಕೂಗಿದರು.</p>.<p>ಕರವೇ ಮಹಿಳಾ ಘಟಕದ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷೆ ಶ್ವೇತಾ ಮೋಹನ್ ಮಾತನಾಡಿ, ‘ಸಚಿವೆ ಶೋಭಾ ಕರಂದ್ಲಾಜೆ ಹಿಂದಿ ಪರವಾಗಿ ಮಾತನಾಡುತ್ತಿದ್ದಾರೆ. ಅವರು ಮೊದಲು ಕನ್ನಡ ನುಡಿಯನ್ನು ಪ್ರೀತಿಸುವುದನ್ನು ಕಲಿಯಲಿ. ಅವರಿಗೆ ಮತ ಹಾಕಿ ಗೆಲ್ಲಿಸಿರುವುದು ಕನ್ನಡದ ಜನರೇ ಹೊರತು ಹಿಂದಿ ಭಾಷಿಕರು ಅಲ್ಲ’ ಎಂದು ಎಚ್ಚರಿಸಿದರು.</p>.<p>‘ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇಂಗ್ಲಿಷ್ ಮತ್ತು ಹಿಂದಿ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಅಲ್ಲಿನ ಮಕ್ಕಳು ಎರಡು ಭಾಷೆ ಕಲಿಯುತ್ತಿರುವಾಗ ಕರ್ನಾಟಕದ ಮಕ್ಕಳು ಯಾಕೆ ಮೂರನೇ ಭಾಷೆಯ ಹೊರೆಯನ್ನು ಹೊತ್ತುಕೊಳ್ಳಬೇಕು. ಬಿಜೆಪಿ ನಾಯಕರಿಗೆ ಈ ಸಾಮಾನ್ಯ ಜ್ಞಾನವಿಲ್ಲವೇ? ರೈಲ್ವೆ ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯ ಆಗುತ್ತಿದ್ದಾಗ ಶೋಭಾ ಅವರು ಯಾವ ರಾಜ್ಯದ ಪ್ರವಾಸದಲ್ಲಿದ್ದರು’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಆನಂದರಾವ್ ವೃತ್ತದಲ್ಲಿ ಜಮಾವಣೆಗೊಂಡ ಕರ್ನಾಟಕ ರಕ್ಷಣಾ ವೇದಿಕೆ ನಗರ ಜಿಲ್ಲಾ ಘಟಕದ ಮಹಿಳಾ ಕಾರ್ಯಕರ್ತರು ಶೋಭಾ ಕರಂದ್ಲಾಜೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶೋಭಾ ಅವರ ಪ್ರತಿಕೃತಿ ದಹಿಸಿಲು ಯತ್ನಿಸಿದರು. ಪ್ರತಿಭಟನಕಾರರನ್ನು ಸ್ಥಳದಲ್ಲಿದ್ದ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ ಬಿಡುಗಡೆ ಮಾಡಿದರು. </p>.<p>‘ಹಿಂದಿ ಹೇರಿಕೆ ಪರವಾಗಿ ಬಿಜೆಪಿಯ ಬಿ.ವೈ.ವಿಜಯೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್.ಅಶೋಕ,ಬಿ. ಶ್ರೀರಾಮುಲು, ಸುರೇಶ್ ಕುಮಾರ್ ಅವರು ಕೂಡ ಮಾತನಾಡುತ್ತಿದ್ದಾರೆ’ ಎಂದು ಆರೋಪಿಸಿದ ಕಾರ್ಯಕರ್ತರು, ಅವರ ವಿರುದ್ಧವೂ ಘೋಷಣೆಗಳನ್ನು ಕೂಗಿದರು.</p>.<p>ಕರವೇ ಮಹಿಳಾ ಘಟಕದ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷೆ ಶ್ವೇತಾ ಮೋಹನ್ ಮಾತನಾಡಿ, ‘ಸಚಿವೆ ಶೋಭಾ ಕರಂದ್ಲಾಜೆ ಹಿಂದಿ ಪರವಾಗಿ ಮಾತನಾಡುತ್ತಿದ್ದಾರೆ. ಅವರು ಮೊದಲು ಕನ್ನಡ ನುಡಿಯನ್ನು ಪ್ರೀತಿಸುವುದನ್ನು ಕಲಿಯಲಿ. ಅವರಿಗೆ ಮತ ಹಾಕಿ ಗೆಲ್ಲಿಸಿರುವುದು ಕನ್ನಡದ ಜನರೇ ಹೊರತು ಹಿಂದಿ ಭಾಷಿಕರು ಅಲ್ಲ’ ಎಂದು ಎಚ್ಚರಿಸಿದರು.</p>.<p>‘ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇಂಗ್ಲಿಷ್ ಮತ್ತು ಹಿಂದಿ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಅಲ್ಲಿನ ಮಕ್ಕಳು ಎರಡು ಭಾಷೆ ಕಲಿಯುತ್ತಿರುವಾಗ ಕರ್ನಾಟಕದ ಮಕ್ಕಳು ಯಾಕೆ ಮೂರನೇ ಭಾಷೆಯ ಹೊರೆಯನ್ನು ಹೊತ್ತುಕೊಳ್ಳಬೇಕು. ಬಿಜೆಪಿ ನಾಯಕರಿಗೆ ಈ ಸಾಮಾನ್ಯ ಜ್ಞಾನವಿಲ್ಲವೇ? ರೈಲ್ವೆ ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯ ಆಗುತ್ತಿದ್ದಾಗ ಶೋಭಾ ಅವರು ಯಾವ ರಾಜ್ಯದ ಪ್ರವಾಸದಲ್ಲಿದ್ದರು’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>