ಮಂಗಳವಾರ ಟಿ.ಸಿ. ಪಾಳ್ಯದ ರುದ್ರಭೂಮಿಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಶೋಭಾ ಕರಂದ್ಲಾಜೆ, ‘ನಮ್ಮ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಪ್ರಕಾಶ್ ಅವರ ಸಾವು ದುಃಖ ತಂದಿದೆ. ನಮ್ಮ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ದೇವರು ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ. ಅವರ ಕುಟುಂಬದ ಜತೆ ನಾವಿದ್ದೇವೆ‘ ಎಂದು ಹೇಳಿದರು.