<p><strong>ಪೀಣ್ಯ ದಾಸರಹಳ್ಳಿ:</strong> ‘ಹಿಂದೂ ಸಮಾಜದ ಏಕತೆ, ಹಿಂದೂ ಸಂಸ್ಕೃತಿಯ ರಕ್ಷಣೆ, ರಾಷ್ಟ್ರೀಯತೆಯ ಜಾಗೃತಿಗಾಗಿ ಹಿಂದೂ ಸಮಾಜೋತ್ಸವ ನಡೆಯುತ್ತಿದೆ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.</p>.<p>ರುಕ್ಮಿಣಿ ನಗರದಲ್ಲಿ ಹಿಂದೂ ಸಮಾಜೋತ್ಸವದ ಶೋಭಾ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಭಾರತಾಂಬೆಯ ಭಾವಚಿತ್ರ, ನೂರಾರು ಮಹಿಳೆಯರಿಂದ ಪೂರ್ಣ ಕುಂಭ ಕಳಶ, ಭಜನೆ ಮತ್ತು ಕಲಾತಂಡಗಳೊಂದಿಗೆ ಶೋಭಾಯಾತ್ರೆಯು ನಾಗಸಂದ್ರದ ಎಚ್ಎಂಟಿಯ ಬಿಡಿಎ ಮೈದಾನದವರೆಗೂ ನಡೆಯಿತು.</p>.<p>ದಾಸರಹಳ್ಳಿ ಸಮಾಜೋತ್ಸವ ಸಮಿತಿಯ ಅಧ್ಯಕ್ಷ ಸುಧೀರ್, ‘ಕೌಟುಂಬಿಕ ಮೌಲ್ಯಗಳ ಸಂರಕ್ಷಣೆ, ಸಹಬಾಳ್ವೆ, ಪರಿಸರ ಸಂರಕ್ಷಣೆಯ ಜಾಗೃತಿ, ಸ್ವದೇಶಿ ಭಾವದ ಜಾಗೃತಿ ಮತ್ತು ನಾಗರಿಕ ಶಿಷ್ಟಾಚಾರ ವಿಷಯಗಳತ್ತ ಗಮನಹರಿಸಬೇಕು' ಎಂದರು.</p>.<p>ನಾಗಸಂದ್ರ ಶಾಖೆಯ ಶಿವರಾಜ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾಜೋತ್ಸವ ಸಮಿತಿಯ ಪ್ರಾಂತ ಅಧಿಕಾರಿ ಬಾಲಕೃಷ್ಣ ಕಿಣಿ, ಸಂಯೋಜಕರಾದ ಅನಂತು, ಸೌಂದರ್ಯ ಭರತ್, ಸತ್ಯವೇಲು ಮತ್ತು ಕೃಷ್ಣಮೂರ್ತಿ, ಬಿಜೆಪಿ ಮುಖಂಡರಾದ ಎಂ.ಕೆ. ಜಗದೀಶ್, ಬೆಲ್ಮಾರ್ ಸುರೇಶ್, ವಿಜಯ್ ಕುಮಾರ್, ಲಾರಿ ಮುನಿರಾಜು ಮುಂತಾದವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ‘ಹಿಂದೂ ಸಮಾಜದ ಏಕತೆ, ಹಿಂದೂ ಸಂಸ್ಕೃತಿಯ ರಕ್ಷಣೆ, ರಾಷ್ಟ್ರೀಯತೆಯ ಜಾಗೃತಿಗಾಗಿ ಹಿಂದೂ ಸಮಾಜೋತ್ಸವ ನಡೆಯುತ್ತಿದೆ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.</p>.<p>ರುಕ್ಮಿಣಿ ನಗರದಲ್ಲಿ ಹಿಂದೂ ಸಮಾಜೋತ್ಸವದ ಶೋಭಾ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಭಾರತಾಂಬೆಯ ಭಾವಚಿತ್ರ, ನೂರಾರು ಮಹಿಳೆಯರಿಂದ ಪೂರ್ಣ ಕುಂಭ ಕಳಶ, ಭಜನೆ ಮತ್ತು ಕಲಾತಂಡಗಳೊಂದಿಗೆ ಶೋಭಾಯಾತ್ರೆಯು ನಾಗಸಂದ್ರದ ಎಚ್ಎಂಟಿಯ ಬಿಡಿಎ ಮೈದಾನದವರೆಗೂ ನಡೆಯಿತು.</p>.<p>ದಾಸರಹಳ್ಳಿ ಸಮಾಜೋತ್ಸವ ಸಮಿತಿಯ ಅಧ್ಯಕ್ಷ ಸುಧೀರ್, ‘ಕೌಟುಂಬಿಕ ಮೌಲ್ಯಗಳ ಸಂರಕ್ಷಣೆ, ಸಹಬಾಳ್ವೆ, ಪರಿಸರ ಸಂರಕ್ಷಣೆಯ ಜಾಗೃತಿ, ಸ್ವದೇಶಿ ಭಾವದ ಜಾಗೃತಿ ಮತ್ತು ನಾಗರಿಕ ಶಿಷ್ಟಾಚಾರ ವಿಷಯಗಳತ್ತ ಗಮನಹರಿಸಬೇಕು' ಎಂದರು.</p>.<p>ನಾಗಸಂದ್ರ ಶಾಖೆಯ ಶಿವರಾಜ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾಜೋತ್ಸವ ಸಮಿತಿಯ ಪ್ರಾಂತ ಅಧಿಕಾರಿ ಬಾಲಕೃಷ್ಣ ಕಿಣಿ, ಸಂಯೋಜಕರಾದ ಅನಂತು, ಸೌಂದರ್ಯ ಭರತ್, ಸತ್ಯವೇಲು ಮತ್ತು ಕೃಷ್ಣಮೂರ್ತಿ, ಬಿಜೆಪಿ ಮುಖಂಡರಾದ ಎಂ.ಕೆ. ಜಗದೀಶ್, ಬೆಲ್ಮಾರ್ ಸುರೇಶ್, ವಿಜಯ್ ಕುಮಾರ್, ಲಾರಿ ಮುನಿರಾಜು ಮುಂತಾದವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>