ಆರೋಪಿಗಳ ಜಾಡು ಹಿಡಿದ ಹೊರಟ ಪೊಲೀಸರ ತಂಡಕ್ಕೆ ಆನೇಕಲ್ ಆವಡದೇನಹಳ್ಳಿ ಬಳಿ ಆರೋಪಿಗಳಾದ ಗಂಗಾಧರ್ ಮತ್ತು ಗೋಪಿ ಇರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿಗಳನ್ನು ಅನಿವಾರ್ಯವಾಗಿ ಗುಂಡು ಹಾರಿಸಿ, ಸೆರೆ ಹಿಡಿಯಬೇಕಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.