ಕೋಣನಕುಂಟೆಯಲ್ಲಿ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿ ಪ್ರಹ್ಲಾದ್ (50) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗಾಯಾಳು ಸಿದ್ಧರಾಜು ಅಲಿಯಾಸ್ ಸಿದ್ಧ (43) ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಸ್ತ್ರಚಿಕಿತ್ಸೆ ಮಾಡಿ ಗುಂಡನ್ನು ಹೊರತೆಗೆಯಲಾಗಿದೆ. ಅವರ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ.